ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್ವೆನ್ಷನ್ ಹಾಲ್ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.
ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳುಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್ಗಳಿಂದ ತರಕಾರಿ,ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ಅಂತಹವರನ್ನು ಸದಸ್ಯರನ್ನಾಗಿ ಮಾಡಿಕೊಂಡು ಸಾಲಸೌಲಭ್ಯ ನೀಡಿದರೆ ಅವರ ಆರ್ಥಿಕ ಪ್ರಗತಿಗೆ ಅನುಕೂಲವಾಗಲಿದೆ.
ಖಾಸಗಿ ಸಾಲದಿಂದ ಬಂಡವಾಳ ಹಾಕಿಸದೆ ಸಹಕಾರ ಸಂಘಗಳಿಂದ ಸಾಲ ಕೊಟ್ಟರೆ ಆರ್ಥಿಕವಾಗಿ ನೆರವಾಗಲಿದೆ ಎಂದರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಾಲ ಕೊಡಲಾಗುತ್ತಿಲ್ಲ. ಕೇಂದ್ರಸರ್ಕಾರವಾಗಲೀ ಅಥವಾ ರಾಜ್ಯಸರ್ಕಾರವಾಗಲೀ ಸಹಕಾರ ಸಂಘಗಳಿಗೆ ಅನುದಾನ ಕೊಡುತ್ತಿಲ್ಲ. ಶೇ.೩ರಷ್ಟು ಬಡ್ಡಿದರದಲ್ಲಿ ಸಾಲ ಕೊಡಬಹುದು ಹೊರತು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಸಹಕಾರ ಕ್ಷೇತ್ರ ನಮ್ಮದೆಂದು ಸರ್ಕಾರ ಹೇಳಿಕೊಳ್ಳುತ್ತಿದೆಯೇ ಹೊರತು ಅನುದಾನ ಕೊಡಲು ಮುಂದಾಗುತ್ತಿಲ್ಲ ಎಂದು ಬೇಸರಿಸಿದರು.
ನನ್ನ ಬ್ಯಾಂಕ್,ಬ್ಯಾಂಕ್ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ,ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು. ಠೇವಣಿದಾರರು ಬ್ಯಾಂಕ್,ಸಂಘದ ಮೇಲೆ ವಿಶ್ವಾಸ ಇಟ್ಟು ಠೇವಣಿ ಇಡುತ್ತಾರೆ.ಸದಸ್ಯರಿಗೆ ಕಾಲಕಾಲಕ್ಕೆ ಸೌಲಭ್ಯಗಳನ್ನು ನೀಡಿದರೆ ಮತ್ತಷ್ಟು ಪ್ರಗತಿ ಹೊಂದಬಹುದು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು.
ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್,ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು. ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…