ಮೈಸೂರು

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ ನಡೆಯುತ್ತಿರುವ ತನಿಖೆ. ಇಲ್ಲಿ ಅನೇಕ ಬಲಿಷ್ಠ ನಾಯಕರ ಕೈವಾಡವಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವವರೆಗೂ ಹೋರಾಟ ಮುಂದುವರೆಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ, ಮುಡಾ ಪ್ರಕರಣ ಸಂಬಂಧ ಮುಡಾ ಕಚೇರಿ ಮೇಲೆ ಇಡಿ ದಾಳಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನೀಡಿದ ದೂರಿನ ಆಧಾರದ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ. ನನ್ನ ಹೋರಾಟಕ್ಕೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಇಡಿ ಅಧಿಕಾರಿಗಳಿಗೆ 50:50 ಅನುಪಾತದ ಬದಲಿ ನಿವೇಶನಗಳ ಅನೇಕ ದಾಖಲೆಗಳನ್ನು ಕೊಟ್ಟಿದ್ದೆ. ಇವುಗಳಿಗೆ ಪೂರಕವಾಗಿ ದಾಖಲೆಗಳನ್ನು ಸಂಗ್ರಹಿಸಲು ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಇದು ನನ್ನ ಹೋರಾಟಕ್ಕೆ ಹಾಗೂ ಸತ್ಯಕ್ಕೆ ಸಿಗುತ್ತಿರುವ ಜಯವಾಗಿದೆ ಎಂದು ಹೇಳಿದರು.

ಮುಡಾದಲ್ಲಿ ಹಗರಣ ನಡೆದಿದೆ ಎಂದು ದೂರು ನೀಡಲು ಹೋದಾಗ ನನ್ನನ್ನು ನೋಡಿ ವ್ಯಂಗ್ಯವಾಡಿದ್ದರು. ಅಲ್ಲದೇ, ಈ ಪ್ರಕರಣ ಇ.ಡಿ.ವ್ಯಾಪ್ತಿಗೆ ಬರುವುದಿಲ್ಲವೆಂಬಂತೆ ಮಾತನಾಡಿದ್ದರು. ಆದರೆ, ಇದೀಗ ಇ.ಡಿ.ಅಧಿಕಾರಿಗಳು ಮುಡಾದ ದಾಖಲೆಗಳನ್ನು ಶೋಧ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ನನ್ನ ಗೆಲುವು ನಿಶ್ಚಿತ ಎಂದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

18 mins ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

38 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

53 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

1 hour ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

2 hours ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

2 hours ago