ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ ನಡೆಯುತ್ತಿರುವ ತನಿಖೆ. ಇಲ್ಲಿ ಅನೇಕ ಬಲಿಷ್ಠ ನಾಯಕರ ಕೈವಾಡವಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವವರೆಗೂ ಹೋರಾಟ ಮುಂದುವರೆಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ, ಮುಡಾ ಪ್ರಕರಣ ಸಂಬಂಧ ಮುಡಾ ಕಚೇರಿ ಮೇಲೆ ಇಡಿ ದಾಳಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನೀಡಿದ ದೂರಿನ ಆಧಾರದ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ. ನನ್ನ ಹೋರಾಟಕ್ಕೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಇಡಿ ಅಧಿಕಾರಿಗಳಿಗೆ 50:50 ಅನುಪಾತದ ಬದಲಿ ನಿವೇಶನಗಳ ಅನೇಕ ದಾಖಲೆಗಳನ್ನು ಕೊಟ್ಟಿದ್ದೆ. ಇವುಗಳಿಗೆ ಪೂರಕವಾಗಿ ದಾಖಲೆಗಳನ್ನು ಸಂಗ್ರಹಿಸಲು ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಇದು ನನ್ನ ಹೋರಾಟಕ್ಕೆ ಹಾಗೂ ಸತ್ಯಕ್ಕೆ ಸಿಗುತ್ತಿರುವ ಜಯವಾಗಿದೆ ಎಂದು ಹೇಳಿದರು.
ಮುಡಾದಲ್ಲಿ ಹಗರಣ ನಡೆದಿದೆ ಎಂದು ದೂರು ನೀಡಲು ಹೋದಾಗ ನನ್ನನ್ನು ನೋಡಿ ವ್ಯಂಗ್ಯವಾಡಿದ್ದರು. ಅಲ್ಲದೇ, ಈ ಪ್ರಕರಣ ಇ.ಡಿ.ವ್ಯಾಪ್ತಿಗೆ ಬರುವುದಿಲ್ಲವೆಂಬಂತೆ ಮಾತನಾಡಿದ್ದರು. ಆದರೆ, ಇದೀಗ ಇ.ಡಿ.ಅಧಿಕಾರಿಗಳು ಮುಡಾದ ದಾಖಲೆಗಳನ್ನು ಶೋಧ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ನನ್ನ ಗೆಲುವು ನಿಶ್ಚಿತ ಎಂದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…