ಮೈಸೂರು

ಸುರಕ್ಷಿತ ಜೀವನ ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ : ರವೀಂದ್ರ ಹೆಗಡೆ

ಮೈಸೂರು : ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್ನಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಲಭೂತ ಹಕ್ಕು ಆದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು ಎಂದರು.

ಬೃಹತ್ ನಗರಗಳಲ್ಲಿ, ಹೋಟೆಲ್ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು. ಬಾಲಕಾರ್ಮಿಕರು ಉತ್ಪಾದಿಸುವ ಪದಾರ್ಥಗಳನ್ನು ನಾವು ತೆಗೆದುಕೊಳ್ಳದಿರುವುದರಿಂದ ಪರೋಕ್ಷವಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಬಹುದು ಎಂದರು.

ಬಾಲಕಾರ್ಮಿಕ ಮಕ್ಕಳಿಗೆ ಸುರಕ್ಷಿತ ಆರೋಗ್ಯ ಜೀವನವನ್ನು ಕಟ್ಟಿಕೊಡುವ ಕೆಲಸ ಮಾಡುವಲ್ಲಿ ಪ್ರತಿಯೊಬ್ಬರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ಸಂಬoಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಬಾಲಕಾರ್ಮಿಕರು ಕಂಡುಬoದಲ್ಲಿ ಸಂಬoಧಪಟ್ಟ ಅಧಿಕಾರಿಗಳಿಗೆ ತಿಳಿಸಿ, ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕು. ಸಂವಿಧಾನದ ಆಶಯದಂತೆ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕೊಡಿಸಬೇಕು. ಮಕ್ಕಳ ದುರ್ಬಳಕೆ ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.

ಬಾಲಕಾರ್ಮಿಕ ನಿರ್ಮೂಲನೆಗಾಗಿ ಪ್ರತಿಯೊಬ್ಬ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಮುಂಬರುವ ಮಕ್ಕಳ ದಿನಾಚರಣೆಯ ವೇಳೆಗೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಪಣ ತೊಡಬೇಕು ಎಂದರು.

ಶಾಲೆಗೆ ಹೋಗದಿರುವ ಮಕ್ಕಳು ಸಮಾಜದಲ್ಲಿ ಯಾವುದೇ ರೀತಿಯ ಸಮಾಜ ಘಾತುಕ ಕೆಲಸವನ್ನಾದರೂ ಮಾಡಬಹುದು. ಆದ್ದರಿಂದ ಎಲ್ಲಾ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಅವರಿಗೆ ಮೂಲಭೂತ ಸೌಕರ್ಯಗಳು ದೊರಕುವಂತೆ ಮಾಡಬೇಕು. ಇದಕ್ಕೆ ಜಿಲ್ಲಾಡಳಿತದ ಜೊತೆ ಎಲ್ಲಾ ಇಲಾಖೆಗಳು ಹಾಗೂ ವಿವಿಧ ಸಂಘ-ಸoಸ್ಥೆಗಳು ಕೈ ಜೋಡಿಸಿ ಸಹಕರಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ. ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ಯೋಗದಲ್ಲಿ ತೊಡಗಿರುವುದನ್ನು ನಿಷೇಧಿಸಬೇಕು ಈ ನಿಟ್ಟಿನಲ್ಲಿ ಯಾವುದೇ ಕೆಲಸಕ್ಕೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಮೊದಲು ಮಾಲೀಕರು ಎಚ್ಚರಿಕೆ ವಹಿಸಬೇಕು. ಮಾನವನ ಜೀವನದಲ್ಲಿ ಬಾಲ್ಯಾವಸ್ಥೆ ಮತ್ತು ಶಿಕ್ಷಣ ಅತ್ಯಂತ ಪ್ರಮುಖವಾದ ಘಟ್ಟವಾಗಿದ್ದು, ಇವೆರಡೂ ಉಲ್ಲಂಘನೆಯಾಗದoತೆ ‘ಬದ್ಧತೆಯಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ’ ಮಾಡುವುದು ಈ ವರ್ಷದ ಘೋಷ ವಾಕ್ಯವಾಗಿದೆ ಎಂದರು.

1098 ಮಕ್ಕಳ ಸಹಾಯವಾಣಿಯ ಜೊತೆಗೆ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಬಹುಶಃ ಪ್ರತಿಯೊಂದು ಮಕ್ಕಳಿಗೂ ಶಿಕ್ಷಣವನ್ನು ನೀಡಿದರೆ ಬಾಲಕಾರ್ಮಿಕ ಪದ್ಧತಿಯನ್ನು ನಾಶ ಮಾಡಬಹುದು ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ಪ್ರಮಾಣ ವಚನವನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ. ಗಾಯತ್ರಿ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಯೋಗೇಶ್ ಎನ್.ಟಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ್ಗೌಡ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ರಜಿಯಾ ಸುಲ್ತಾನ್, ಮೈಸೂರು ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಾಜೇಶ್ ಕೆ.ಜಾದವ್, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಕುಸುಮ, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago