ಮೈಸೂರು

ಸಮಾಜ ಬದಲಾವಣೆಗೆ ಶಿಕ್ಷಣ ಅಗತ್ಯ : ಸಿಎಂ ಪ್ರತಿಪಾದನೆ

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಮೈಸೂರು ಜಿಲ್ಲಾ ಕುಂಬಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ ಸಮಾಜದವರು ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ ಕಲೆಯ ಪರಿಣಿತಿ ವಿಶೇಷವಾಗಿದೆ. ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ. 12 ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಮತ್ತು ದಾಸೋಹಗಳನ್ನು ಸಮಾಜಕ್ಕೆ ನೀಡಿದರು. ಚತುರ್ವರ್ಣ ವ್ಯವಸ್ಥೆ ಹಿಂದಿನಿಂದಲೂ ಬಂದಿರುವ ವ್ಯವಸ್ಥೆ. ಆರ್ಥಿಕವಾಗಿ ಹಿಂದುಳಿದ ಶೂದ್ರ ವರ್ಗದವರು ಜನಸಂಖ್ಯೆಯ ಸುಮಾರು ಶೇ.80 ರಷ್ಟಿದ್ದು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.

ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಲು, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ
ಶಿಕ್ಷಣದ ಮಹತ್ವವನ್ನು ಮನಗಂಡು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿದರು. ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದ ಮೇಲೆ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿತು. ಸ್ವಾತಂತ್ರ್ಯ ಬಂದ ನಂತರ ನಮ್ಮಲ್ಲಿ ಅನೇಕರು ವಿದ್ಯಾವಂತರಾಗಲು ಸಾಧ್ಯವಾಯಿತು ಎಂದರು.

ವಿದ್ಯೆ ಯಾರ ಸ್ವತ್ತೂ ಅಲ್ಲ
ಎಲ್ಲರೂ ವಿದ್ಯಾವಂತರಾಗಲೇಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಬರಬೇಕು ಎಂದರು. ವಿದ್ಯೆ ಯಾರ ಸ್ವತ್ತೂ ಅಲ್ಲ. ಪಟ್ಟಭದ್ರ ಹಿತಾಸಕ್ತರು, ವಿದ್ಯೆ ಒಂದು ವರ್ಗಕ್ಕೆ ಮಾತ್ರ ಸೀಮಿತ ಎನ್ನುವ ಭಾವನೆಯನ್ನು ಬಿತ್ತಿದ್ದರು. ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದರು. ನಿಮ್ಮಲ್ಲೂ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಗಳಾಗಬೇಕು ಎಂದರು.

ಜಾತಿವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು
ಬೇಡರ ಜಾತಿಗೆ ಸೇರಿದ ವಾಲ್ಮೀಕಿ ರಾಮಾಯಣ ಬರೆದರು. ಬೆಸ್ತರ ಜಾತಿಗೆ ಸೇರಿದ ವ್ಯಾಸ ಮಹರ್ಷಿಗಳು ಮಹಾಭಾರತವನ್ನು ಬರೆದರು. ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ರತ್ನಪ್ಪ ಭರಮಪ್ಪ ಕುಂಬಾರರು ಸಮುದಾಯದ ಧೀಮಂತ ನಾಯಕರಾಗಿದ್ದರು. ಜಾತಿವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು. ನಾನು ವಕೀಲ ಶಿಕ್ಷಣ ಪಡೆದಿದ್ದರಿಂದಲೇ ಇಂದು ಮುಖ್ಯಮಂತ್ರಿಯಾಗಿ ನಿಮ್ಮೆದುರಿರಲು ಸಾಧ್ಯವಾಗಿದೆ. ಮಹಾನ್ ಜ್ಞಾನಿಯಾಗಿದ್ದ ಶ್ರೀ ನಾರಾಯಣ ಗುರುಗಳು, ಒಂದೇ ಧರ್ಮ, ಒಂದೇ ಜಾತಿ ಎಂದು ಪ್ರತಿಪಾದಿಸಿದರು. ಅಸ್ಪೃಶ್ಯತೆಯಿಂದ ದೇಗುಲಗಳಿಗೆ ಪ್ರವೇಶ ನಿರ್ಬಂಧಿಸುತ್ತಿದ್ದ ಕಾಲದಲ್ಲಿ, ‘ನಿಮ್ಮದೇ ದೇವಾಲಯಗಳನ್ನು ನಿರ್ಮಿಸಿಕೊಳ್ಳಿ’ ಎಂದು ಜನರಿಗೆ ಕರೆ ನೀಡಿದ್ದರು. ಸ್ವಾತಂತ್ರ್ಯ ಯಶಸ್ವಿಯಾಗಲು ಶಿಕ್ಷಣ ಅತ್ಯಗತ್ಯ ಎಂದರು.

ಕುಂಬಾರ ಸಮಾಜದ ಅಭಿವೃದ್ಧಿ ಸರ್ಕಾರ ಬದ್ಧ
ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು. ಕುಂಬಾರ ಸಮಾಜದ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago