ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ.
ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಪರಿಪಾಟಲು ಪಡುವಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮ ಮಹದೇವನಗರ. ಇಲ್ಲಿ ಯಾರೇ ಮೃತಪಟ್ಟರೂ ಇದುವರೆಗೂ ಅರಣ್ಯ ಪ್ರದೇಶದಲ್ಲಿ ಶವಸಂಸ್ಕಾರ ಮಾಡಿಕೊಂಡು ಬರುತ್ತಿದ್ದರು.
ಕಾರಣ ಇಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ. ಇದೀಗ ಅರಣ್ಯ ಪ್ರದೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಯಾವುದೇ ಸ್ಥಳವಿಲ್ಲ. ಗ್ರಾಮದಲ್ಲಿ ಒಂದುಕಾಲು ಎಕರೆ ಸರ್ಕಾರಿ ಜಮೀನಿದ್ದು, ಇದನ್ನು ಸ್ಮಶಾನಕ್ಕಾಗಿ ಮೀಸಲಿಡುವಂತೆ ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ಕೊಟ್ಟಿದ್ದರು. ಆದ್ರೆ ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ.
ಇದೀಗ ಗ್ರಾಮದಲ್ಲಿ ಸಾವು ಸಂಭವಿಸಿದ್ದು, ಮೃತದೇಹದ ಶವಸಂಸ್ಕಾರಕ್ಕೆ ಸ್ಥಳವಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದು, ಮನೆ ಮುಂದೆ ಗುಂಡಿ ತೋಡಿ ಶವ ಹೂಳಲು ನಿರ್ಧರಿಸಿದ್ದ ಜನ ಇದೀಗ ಮಹದೇವನಗರದಿಂದ 6 ಕಿಮೀ ದೂರವಿರುವ ಹೊಸವೀಡು ಗ್ರಾಮಕ್ಕೆ ಶವ ಕೊಂಡೊಯ್ಯಲು ನಿರ್ಧರಿಸಿದ್ದಾರೆ.
ಶವಸಂಸ್ಕಾರಕ್ಕಾಗಿ ಪಕ್ಕದ ಗ್ರಾಮವನ್ನು ಅವಲಂಬಿಸಬೇಕಾದ ದುರ್ಗತಿ ಎದುರಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…