ಮೈಸೂರು

5 ಹುಲಿಗಳ ಸಾವಿನ ಎಫೆಕ್ಟ್: ಶವಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ.

ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಪರಿಪಾಟಲು ಪಡುವಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮ ಮಹದೇವನಗರ. ಇಲ್ಲಿ ಯಾರೇ ಮೃತಪಟ್ಟರೂ ಇದುವರೆಗೂ ಅರಣ್ಯ ಪ್ರದೇಶದಲ್ಲಿ ಶವಸಂಸ್ಕಾರ ಮಾಡಿಕೊಂಡು ಬರುತ್ತಿದ್ದರು.

ಕಾರಣ ಇಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ. ಇದೀಗ ಅರಣ್ಯ ಪ್ರದೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಯಾವುದೇ ಸ್ಥಳವಿಲ್ಲ. ಗ್ರಾಮದಲ್ಲಿ ಒಂದುಕಾಲು ಎಕರೆ ಸರ್ಕಾರಿ ಜಮೀನಿದ್ದು, ಇದನ್ನು ಸ್ಮಶಾನಕ್ಕಾಗಿ ಮೀಸಲಿಡುವಂತೆ ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್‌ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ಕೊಟ್ಟಿದ್ದರು. ಆದ್ರೆ ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ.

ಇದೀಗ ಗ್ರಾಮದಲ್ಲಿ ಸಾವು ಸಂಭವಿಸಿದ್ದು, ಮೃತದೇಹದ ಶವಸಂಸ್ಕಾರಕ್ಕೆ ಸ್ಥಳವಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದು, ಮನೆ ಮುಂದೆ ಗುಂಡಿ ತೋಡಿ ಶವ ಹೂಳಲು ನಿರ್ಧರಿಸಿದ್ದ ಜನ ಇದೀಗ ಮಹದೇವನಗರದಿಂದ 6 ಕಿಮೀ ದೂರವಿರುವ ಹೊಸವೀಡು ಗ್ರಾಮಕ್ಕೆ ಶವ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಶವಸಂಸ್ಕಾರಕ್ಕಾಗಿ ಪಕ್ಕದ ಗ್ರಾಮವನ್ನು ಅವಲಂಬಿಸಬೇಕಾದ ದುರ್ಗತಿ ಎದುರಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

11 mins ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

23 mins ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

47 mins ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

1 hour ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

2 hours ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

3 hours ago