ಮೈಸೂರು

ಕಪಿಲಾ ನದಿ ತಗ್ಗು ಪ್ರದೇಶಗಳ ಸುರಕ್ಷತೆಗೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ : ಶಾಸಕ ದರ್ಶನ್‌ ಧ್ರುವನಾರಾಯಣ್‌ ಭರವಸೆ

ನಂಜನಗೂಡು : ಪದೇ ಪದೇ ಪ್ರವಾಹಕ್ಕೆ ತುತ್ತಾಗುತ್ತಿರುವ ತಾಲ್ಲೂಕಿನ ಕಪಿಲಾ ನದಿಯ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಜನತೆಯ ಅಹವಾಲು ಸ್ವೀಕರಿಸಿ ಅವರು ʻಆಂದೋಲನʼ ದೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಾಗ್ಗೆ ಕಪಿಲಾ ಪ್ರವಾಹಕ್ಕೆ ಸಿಲುಕುವ ಗ್ರಾಮಗಳ ಸಂಪೂರ್ಣ ಮಾಹಿತಿಯನ್ನು ತರಿಸಿಕೊಂಡಿದ್ದು, ಅದಕ್ಕೊಂದು ಶಾಶ್ವತ ಪರಿಹಾರ ರೂಪಿಸುವ ಯೋಜನೆಯನ್ನು ಈಗಾಗಲೇ ರೂಪಿಸಿದ್ದಾರೆ. ಅದು ಹಂತ ಹಂತವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.

ಈಗಾಗಲೇ ತಾಲ್ಲೂಕು ಆಡಳಿತದಿಂದ ಆಯಾ ಗ್ರಾಮಗಳಿಗೆ ಬದಲಿ ನಿವೇಶನ ಗುರುತಿಸುವ ಕಾರ್ಯವೂ ಸಾಗಿದೆ ಎಂದು ಹೇಳಿದರು.

ಈವರೆಗೆ ಪ್ರವಾಹದ ಯಾವುದೇ ಸುಳಿವಿಲ್ಲ. ಕಪಿಲಾ ಜಲಾಶಯದಿಂದ ಬಿಡಬಹುದಾದ ನೀರಿನ ಪ್ರಮಾಣದ ಮೇಲೆಯೇ ನಮ್ಮ ತಾಲ್ಲೂಕಿನ ಪ್ರವಾಹ ಭೀತಿಯ ಆಳ-ಅಗಲ ತಿಳಿಯುವುದರಿಂದ ಹಿಂದಿನ ಪ್ರವಾಹದ ಆಧಾರದ ಮೇಲೆ ನಾವು ತಾಲ್ಲೂಕಿನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದರು.

ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು, ತಾ.ಪಂ ಇಒ ಜೆರಾಲ್ಡ್ ರಾಜೇಶ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ ರಾಜು, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಮಾರುತಿ ಮತ್ತಿತರರು ಹಾಜರಿದ್ದರು.

ವಸತಿ ಶಾಲೆ ಸಮಸ್ಯೆ; ಮಂಗಳವಾರ ಸಭೆ
ಕಸ್ತೂರ್‌ಬಾ ವಸತಿ ಶಾಲೆಯ ವಾರ್ಡನ್, ಅಕೌಂಟೆಂಟ್ ಬದಲಾವಣೆ ಸೇರಿದಂತೆ ಶಿಕ್ಷಕರೇ ಈಗ ವಾರ್ಡನ್ ಆಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ಹಾಗೂ ಅಧಿಕಾರಿಗಳ ಎಡವಟ್ಟನ್ನು ನಾನು ‘ಆಂದೋಲನ’ ದಿನಪತ್ರಿಕೆಯ ಮೂಲಕ ತಿಳಿದುಕೊಂಡಿದ್ದು, ಅಲ್ಲಿನ ಸಮಸ್ಯೆ ಕುರಿತಂತೆ ಮಂಗಳವಾರ ಸಭೆ ನಡೆಸಿ ಚರ್ಚಿಸಿ ಪರಿಹಾರ ರೂಪಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

9 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

38 mins ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

56 mins ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

1 hour ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

12 hours ago