ಮೈಸೂರು

ಶಾಲಾ ಮಕ್ಕಳಿಗೆ ವಾರದ 6 ದಿನ ಮೊಟ್ಟೆ: ಡಾ.ಹೆಚ್.ಸಿ ಮಹದೇವಪ್ಪ

ಮೈಸೂರು: ಪ್ರಸ್ತುತ ಶಾಲೆಯಲ್ಲಿ ವಾರಕ್ಕೆ 2 ದಿನ ಮಾತ್ರ ಮೊಟ್ಟೆಯನ್ನು ನೀಡುತ್ತಾ ಬಂದಿದ್ದರು. ಆದರೆ ಪ್ರಗತಿಪರ ಕೈಗಾರಿಕಾ ಉದ್ಯಮಿಗಳಾದ ಅಜಿಮ್ ಪ್ರೇಮ್ ಜಿ ಯವರ ಸಿ.ಆರ್.ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ಹಣ ನೀಡಿದ್ದು, ಇದರಿಂದ 1 ರಿಂದ 10 ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆಯನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪ ಅವರು ಸೂಚನೆ ನೀಡಿದರು.

ಇಂದು ಮಹಾರಾಜ ಕಾಲೇನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ರಾಜ್ಯ ಸರ್ಕಾರದ ಪಿ.ಎಂ.ಪೋಷಣ್ -ಮಧ್ಯಾಹ್ನ ಉಪಹಾರ ಯೋಜನೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿಧ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ವಿಟಮಿನ್ ಮತ್ತು ಪ್ರೋಟೀನ್ ಮುಖ್ಯ, ಆದ್ದರಿಂದ ಮಕ್ಕಳಿಗೆ ಬಿಸಿ ಊಟದ ಜೊತೆ ಮೊಟ್ಟೆಯನ್ನು ನೀಡಲಾಗುತ್ತಿದೆ. ವಾರದಲ್ಲಿ 2 ದಿನ ಮೊಟ್ಟೆಯನ್ನು ನೀಡುತ್ತಾ ಬಂದಿದ್ದೇವೆ. ಸಿಆರ್‌ಎಫ್ ಫೌಂಡೇಶನ್ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಹೇಳಿದಂತೆ, ರಾಜ್ಯದಲ್ಲಿ 88% ಮಕ್ಕಳು ಮೊಟ್ಟೆಯನ್ನು ಪಡೆದರೆ ಇನ್ನು 8% ಮಕ್ಕಳು ಬಾಳೆಹಣ್ಣು ಹಾಗೂ ಉಳಿದ 4% ಮಕ್ಕಳು ಕಡಲೆಹಿಟ್ಟಿನ ಚಕ್ಕುಲಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಎಲ್ಲಾ ಮಕ್ಕಳು ಪ್ರತಿಯೊಂದು ಸೌಲಭ್ಯಗಳನ್ನು ಪಡೆದು ಸದೃಢವಾಗಬೇಕು, ಉತ್ತಮ ರೀತಿಯ ಆಹಾರವನ್ನು ಸೇವಿಸಿ ಆರೋಗ್ಯಕರ ಜೀವನ ಶೈಲಿಯಲ್ಲಿ ಬೆಳೆಯಬೇಕು ಎಂದು ಸರ್ಕಾರ ಸಮವಸ್ತ್ರ, ಪಠ್ಯಪುಸ್ತಕ, ಬಿಸಿ ಹಾಲಿನ ವಿತರಣೆ, ಜೊತೆಗೆ ಇತ್ತೀಚಿಗೆ ರಾಗಿ ಮಾಲ್ಟ್ ಸಹ ಕೊಡುತ್ತಾ ಇದ್ದೇವೆ. ಇಷ್ಟೆಲ್ಲ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ನೀವು ಚೆನ್ನಾಗಿ ಓದಬೇಕು ಒಳ್ಳೆಯ ಸಂವಿಧಾನ ಕಟ್ಟುವಂತ ದೇಶದ ಉತ್ತಮ ಪ್ರಜೆಯಾಗಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಶಾಲೆಯ ಹಂತದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಬೇಕು ಜೊತೆಗೆ ಅರ್ಥೈಸಿ, ಬೇರೆಯವರಿಗೆ ಹೇಳಬೇಕು. ಸಂವಿಧಾನದ ಪೀಠಿಕೆಯನ್ನು ನೋಡಿಕೊಳ್ಳದೆ ಪ್ರತಿಯೊಬ್ಬರು ಹೇಳಲು ಕಲಿಯಬೇಕು ಭಾರತೀಯರಾದ ನಾವು ಯಾವುದೇ ಜಾತಿ ಧರ್ಮ ಬೇಧಕ್ಕೆ ತಲೆಕೊಡದೆ ಅಭಿವೃದ್ಧಿ ಕಡೆಗೆ ನಮ್ಮ ನಡೆ ಇರಬೇಕು. ನಾವು ಬಾಬಾ ಸಾಹೇಬ್ ಬಿ. ಆರ್. ಅಂಬೇಡ್ಕರ್ ರವರ ಸಂವಿಧಾನದ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು. ನಮಗೆ ಧಾರ್ಮಿಕ ಸ್ವಾತಂತ್ರ್ಯವಿದೆ, ಮಾತನಾಡುವ ಸ್ವಾತಂತ್ರ್ಯವಿದೆ ಆಚಾರ ವಿಚಾರಗಳ ಬಗ್ಗೆ ತಿಳಿಯಲು ಮುಕ್ತವಾದ ಅವಕಾಶವಿದೆ. ನಾವೆಲ್ಲರೂ ಸಹೋದರತ್ವದಿಂದ ಇರಬೇಕು ಅದನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್. ಮಂಜೇಗೌಡ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

47 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

58 mins ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago