ಮೈಸೂರು

ಶಾಲಾ ಮಕ್ಕಳಿಗೆ ವಾರದ 6 ದಿನ ಮೊಟ್ಟೆ: ಡಾ.ಹೆಚ್.ಸಿ ಮಹದೇವಪ್ಪ

ಮೈಸೂರು: ಪ್ರಸ್ತುತ ಶಾಲೆಯಲ್ಲಿ ವಾರಕ್ಕೆ 2 ದಿನ ಮಾತ್ರ ಮೊಟ್ಟೆಯನ್ನು ನೀಡುತ್ತಾ ಬಂದಿದ್ದರು. ಆದರೆ ಪ್ರಗತಿಪರ ಕೈಗಾರಿಕಾ ಉದ್ಯಮಿಗಳಾದ ಅಜಿಮ್ ಪ್ರೇಮ್ ಜಿ ಯವರ ಸಿ.ಆರ್.ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ಹಣ ನೀಡಿದ್ದು, ಇದರಿಂದ 1 ರಿಂದ 10 ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆಯನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪ ಅವರು ಸೂಚನೆ ನೀಡಿದರು.

ಇಂದು ಮಹಾರಾಜ ಕಾಲೇನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ರಾಜ್ಯ ಸರ್ಕಾರದ ಪಿ.ಎಂ.ಪೋಷಣ್ -ಮಧ್ಯಾಹ್ನ ಉಪಹಾರ ಯೋಜನೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿಧ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ವಿಟಮಿನ್ ಮತ್ತು ಪ್ರೋಟೀನ್ ಮುಖ್ಯ, ಆದ್ದರಿಂದ ಮಕ್ಕಳಿಗೆ ಬಿಸಿ ಊಟದ ಜೊತೆ ಮೊಟ್ಟೆಯನ್ನು ನೀಡಲಾಗುತ್ತಿದೆ. ವಾರದಲ್ಲಿ 2 ದಿನ ಮೊಟ್ಟೆಯನ್ನು ನೀಡುತ್ತಾ ಬಂದಿದ್ದೇವೆ. ಸಿಆರ್‌ಎಫ್ ಫೌಂಡೇಶನ್ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಹೇಳಿದಂತೆ, ರಾಜ್ಯದಲ್ಲಿ 88% ಮಕ್ಕಳು ಮೊಟ್ಟೆಯನ್ನು ಪಡೆದರೆ ಇನ್ನು 8% ಮಕ್ಕಳು ಬಾಳೆಹಣ್ಣು ಹಾಗೂ ಉಳಿದ 4% ಮಕ್ಕಳು ಕಡಲೆಹಿಟ್ಟಿನ ಚಕ್ಕುಲಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಎಲ್ಲಾ ಮಕ್ಕಳು ಪ್ರತಿಯೊಂದು ಸೌಲಭ್ಯಗಳನ್ನು ಪಡೆದು ಸದೃಢವಾಗಬೇಕು, ಉತ್ತಮ ರೀತಿಯ ಆಹಾರವನ್ನು ಸೇವಿಸಿ ಆರೋಗ್ಯಕರ ಜೀವನ ಶೈಲಿಯಲ್ಲಿ ಬೆಳೆಯಬೇಕು ಎಂದು ಸರ್ಕಾರ ಸಮವಸ್ತ್ರ, ಪಠ್ಯಪುಸ್ತಕ, ಬಿಸಿ ಹಾಲಿನ ವಿತರಣೆ, ಜೊತೆಗೆ ಇತ್ತೀಚಿಗೆ ರಾಗಿ ಮಾಲ್ಟ್ ಸಹ ಕೊಡುತ್ತಾ ಇದ್ದೇವೆ. ಇಷ್ಟೆಲ್ಲ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ನೀವು ಚೆನ್ನಾಗಿ ಓದಬೇಕು ಒಳ್ಳೆಯ ಸಂವಿಧಾನ ಕಟ್ಟುವಂತ ದೇಶದ ಉತ್ತಮ ಪ್ರಜೆಯಾಗಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಶಾಲೆಯ ಹಂತದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಬೇಕು ಜೊತೆಗೆ ಅರ್ಥೈಸಿ, ಬೇರೆಯವರಿಗೆ ಹೇಳಬೇಕು. ಸಂವಿಧಾನದ ಪೀಠಿಕೆಯನ್ನು ನೋಡಿಕೊಳ್ಳದೆ ಪ್ರತಿಯೊಬ್ಬರು ಹೇಳಲು ಕಲಿಯಬೇಕು ಭಾರತೀಯರಾದ ನಾವು ಯಾವುದೇ ಜಾತಿ ಧರ್ಮ ಬೇಧಕ್ಕೆ ತಲೆಕೊಡದೆ ಅಭಿವೃದ್ಧಿ ಕಡೆಗೆ ನಮ್ಮ ನಡೆ ಇರಬೇಕು. ನಾವು ಬಾಬಾ ಸಾಹೇಬ್ ಬಿ. ಆರ್. ಅಂಬೇಡ್ಕರ್ ರವರ ಸಂವಿಧಾನದ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು. ನಮಗೆ ಧಾರ್ಮಿಕ ಸ್ವಾತಂತ್ರ್ಯವಿದೆ, ಮಾತನಾಡುವ ಸ್ವಾತಂತ್ರ್ಯವಿದೆ ಆಚಾರ ವಿಚಾರಗಳ ಬಗ್ಗೆ ತಿಳಿಯಲು ಮುಕ್ತವಾದ ಅವಕಾಶವಿದೆ. ನಾವೆಲ್ಲರೂ ಸಹೋದರತ್ವದಿಂದ ಇರಬೇಕು ಅದನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್. ಮಂಜೇಗೌಡ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago