ಮೈಸೂರು

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ’ ಎಂಬ ಅಂತಾ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಉನ್ನತ ಶಿಕ್ಷಣ ಇಲಾಖೆ ಕೊನೆಯ ಕ್ಷಣದಲ್ಲಿ ರದ್ದುಪಡಿಸಿ ಆದೇಶ ಹೊರಡಿಸಿದ್ದರೂ ಸಂಘಟಕರು ಸರ್ಕಾರದ ಎಚ್ಚರಿಕೆಗೂ ಬಗ್ಗದೆ ಬುಧವಾರ ಶುರು ಮಾಡಿದ್ದಾರೆ.

ರಾಜ್ಯ ಸರ್ಕಾರ ನೀಡಿದ್ದ ಆದೇಶದ ಬಗ್ಗೆ ತಲೆ ಕೆಡಿಸಿಕೊಳ್ಳದ ಸಂಘಟಕರು ಸಿದ್ಧತೆ ಮಾಡಿಕೊಂಡಿದ್ದರಿಂದ ನಿರಾತಂಕವಾಗಿ ನಡೆಯುವಂತೆ ನೋಡಿಕೊಂಡರೆ, ಪೂರ್ವನಿಗದಿಯಂತೆ ರಾಜ್ಯಪಾಲ ಥಾವರ್‌ ಚಂದ್ ಗೆದ್ದೋಟ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಕ್ರಮಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.

ಫೌಂಡೇಶನ್ ಅವರು ಆಯೋಜಿಸಿರುವ ಕಾರ್ಯಕ್ರಮಕ್ಕೂ, ಮುಕ್ತ ವಿವಿಗೂ ಸಂಬಂಧವಿಲ್ಲ. ಯಾವುದೇ ಸಹಯೋಗದೊಂದಿಗೆ ಧನಸಹಾಯ ನೀಡುತ್ತಿಲ್ಲವೆಂದು ಕುಲಪತಿಗಳು ಸ್ಪಷ್ಟನೆ ನೀಡಿದ್ದರು. ಹೀಗಿದ್ದರೂ ಮಂಗಳವಾರ ರಾತ್ರಿ ಸಮ್ಮೇಳನವನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದಾಗಿ ಕಾರ್ಯಕ್ರಮ ರದ್ದಾಗಿರಬಹುದೆಂದು ಭಾವಿಸಲಾಗಿತ್ತು. ಆದರೆ, ಬುಧವಾರ ನಿಗದಿಯಂತೆ ಕಾರ್ಯಕ್ರಮ ಆರಂಭವಾಗಿದ್ದು, ಶಿಲ್ಪಿ ಅರುಣ್ ಯೋಗಿ ರಾಜ್ ಅವರು ಏಕಾತ್ಮ ಮಾನವ ದರ್ಶನ ಸಮ್ಮೇಳನದ ಪ್ರದರ್ಶಿನಿಯನ್ನು ಉದ್ಘಾಟಿಸಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago