ಮೈಸೂರು

ಏಕಲವ್ಯ ನಿವಾಸಿಗಳ ಪ್ರತಿಭಟನೆ: ಬಂಧನ, ಬಿಡುಗಡೆ

ಮೈಸೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಠಾತ್ ಪ್ರತಿಭಟನೆ ನಡೆಸಿದ ಏಕಲವ್ಯ ನಗರ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಂಗಾಲದ ಪೊಲೀಸರು, ಹಸುಗೂಸು, ಚಿಕ್ಕ ಮಕ್ಕಳು, ಮಹಿಳೆಯರನ್ನೂ ಬಿಡದೆ 50 ಜನರನ್ನು ಬಂಧಿಸಿ ಕರೆದೋಯ್ದರು. ಮೂರು ವ್ಯಾನ್‌ಗಳಲ್ಲಿ ಅವರನ್ನು ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಲಾಯಿತು.

ಜಿಲ್ಲಾಡಳಿತದ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮೆರವಣಿಗೆ ಚಾಲನೆ ನೀಡಿದ ಸಚಿವರು, ಅಲ್ಲೇ ಕೂಗಳತೆ ದೂರದಲ್ಲಿರುವ ಡಾ.ರಾಜ್‌ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೊರಟರು. ಆಗ ಚಾಮರಾಜ ವೃತ್ತದಲ್ಲಿ ಪ್ರತಿಭಟನಾಕಾರರು ಸಚಿವರಿಗೆ ಘೇರಾವ್ ಹಾಕಿ ಘೋಷಣೆಗಳನ್ನು ಕೂಗಿದರು. ಇದರಿಂದ ಗಲಿಬಿಲಿಗೊಂಡ ಸಚಿವರು, ಮಾಲಾರ್ಪಣೆ ಮಾಡದೆ ಅಲ್ಲಿಂದ ವಾಪಸ್ ಆಗಿ ಕಾರು ಹತ್ತಿ ಹೊರಟು ಹೋದರು. ಇದರಿಂದ ಇನ್ನಷ್ಟು  ಕೆರಳಿದ ಪ್ರತಿಭಟನಾಕಾರರು ಮೆರವಣಿಗೆ ನುಗ್ಗಲು ಪ್ರಯತ್ನಿಸಿದರು. ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾನಿರತ ಮಕ್ಕಳು, ಮಹಿಳೆಯರು ರಸ್ತೆಯಲ್ಲೇ  ಕುಳಿತು ಘೋಷಣೆಗಳನ್ನು ಕೂಗಿದರು.

ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ, ‘ಜಿಲ್ಲಾಧಿಕಾರಿ ಕಚೇರಿ ಎದುರು 50 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಸೌಜನ್ಯಕ್ಕೂ ನಮ್ಮ ಕಷ್ಟ ಕೇಳಲಿಲ್ಲ. ಮನವಿ ಕೊಡಲು ಹೋದರೂ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಏಕಲವ್ಯ ನಗರದ ಅಲೆಮಾರಿ ಸಮುದಾಯದ ನಾಗರಿಕರಿಗೆ ಮನೆ, ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪಂಜಿನ ಮೆರವಣಿಗೆ ನಡೆಸಿದವು. ನಾಡಹಬ್ಬ ದಸರಾ ಮಹೋತ್ಸವಕ್ಕೂ ಯಾವುದೇ ರೀತಿ ಅಡ್ಡಿಪಡಿಸಲಿಲ್ಲ. ಆದರೂ, ನಮ್ಮ ಅಹವಾಲು ಕೇಳುತ್ತಿಲ್ಲ ಎಂದು ಕಿಡಿಕಾರಿದರು.

12 ವರ್ಷಗಳ ಹಿಂದೆ ಕೊಳಗೇರಿ ನಿರ್ಮೂಲನ ಮಂಡಳಿಯ  ಜೆ-ನರ್ಮ್ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿ ನಿವಾಸಿಗಳನ್ನು ಶ್ಯಾದನಹಳ್ಳಿಯ ಗೋಮಾಳಕ್ಕೆ ಸ್ಥಳಾಂತರಿಸಿತು. ಅದನ್ನು ಏಕಲವ್ಯ ನಗರವೆಂದು ಜಿಲ್ಲಾಡಳಿತ ಘೋಷಿಸಿದೆ. ಆದರೆ, ಮನೆ ಹಕ್ಕು ಪತ್ರವನ್ನು ನೀಡದೇ ಅಲೆಸುತ್ತಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

andolana

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

4 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

4 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

4 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

4 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

4 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

4 hours ago