ಮೈಸೂರು

ಏಕಲವ್ಯ ನಿವಾಸಿಗಳ ಪ್ರತಿಭಟನೆ: ಬಂಧನ, ಬಿಡುಗಡೆ

ಮೈಸೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಠಾತ್ ಪ್ರತಿಭಟನೆ ನಡೆಸಿದ ಏಕಲವ್ಯ ನಗರ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಂಗಾಲದ ಪೊಲೀಸರು, ಹಸುಗೂಸು, ಚಿಕ್ಕ ಮಕ್ಕಳು, ಮಹಿಳೆಯರನ್ನೂ ಬಿಡದೆ 50 ಜನರನ್ನು ಬಂಧಿಸಿ ಕರೆದೋಯ್ದರು. ಮೂರು ವ್ಯಾನ್‌ಗಳಲ್ಲಿ ಅವರನ್ನು ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಲಾಯಿತು.

ಜಿಲ್ಲಾಡಳಿತದ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮೆರವಣಿಗೆ ಚಾಲನೆ ನೀಡಿದ ಸಚಿವರು, ಅಲ್ಲೇ ಕೂಗಳತೆ ದೂರದಲ್ಲಿರುವ ಡಾ.ರಾಜ್‌ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೊರಟರು. ಆಗ ಚಾಮರಾಜ ವೃತ್ತದಲ್ಲಿ ಪ್ರತಿಭಟನಾಕಾರರು ಸಚಿವರಿಗೆ ಘೇರಾವ್ ಹಾಕಿ ಘೋಷಣೆಗಳನ್ನು ಕೂಗಿದರು. ಇದರಿಂದ ಗಲಿಬಿಲಿಗೊಂಡ ಸಚಿವರು, ಮಾಲಾರ್ಪಣೆ ಮಾಡದೆ ಅಲ್ಲಿಂದ ವಾಪಸ್ ಆಗಿ ಕಾರು ಹತ್ತಿ ಹೊರಟು ಹೋದರು. ಇದರಿಂದ ಇನ್ನಷ್ಟು  ಕೆರಳಿದ ಪ್ರತಿಭಟನಾಕಾರರು ಮೆರವಣಿಗೆ ನುಗ್ಗಲು ಪ್ರಯತ್ನಿಸಿದರು. ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾನಿರತ ಮಕ್ಕಳು, ಮಹಿಳೆಯರು ರಸ್ತೆಯಲ್ಲೇ  ಕುಳಿತು ಘೋಷಣೆಗಳನ್ನು ಕೂಗಿದರು.

ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ, ‘ಜಿಲ್ಲಾಧಿಕಾರಿ ಕಚೇರಿ ಎದುರು 50 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಸೌಜನ್ಯಕ್ಕೂ ನಮ್ಮ ಕಷ್ಟ ಕೇಳಲಿಲ್ಲ. ಮನವಿ ಕೊಡಲು ಹೋದರೂ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಏಕಲವ್ಯ ನಗರದ ಅಲೆಮಾರಿ ಸಮುದಾಯದ ನಾಗರಿಕರಿಗೆ ಮನೆ, ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪಂಜಿನ ಮೆರವಣಿಗೆ ನಡೆಸಿದವು. ನಾಡಹಬ್ಬ ದಸರಾ ಮಹೋತ್ಸವಕ್ಕೂ ಯಾವುದೇ ರೀತಿ ಅಡ್ಡಿಪಡಿಸಲಿಲ್ಲ. ಆದರೂ, ನಮ್ಮ ಅಹವಾಲು ಕೇಳುತ್ತಿಲ್ಲ ಎಂದು ಕಿಡಿಕಾರಿದರು.

12 ವರ್ಷಗಳ ಹಿಂದೆ ಕೊಳಗೇರಿ ನಿರ್ಮೂಲನ ಮಂಡಳಿಯ  ಜೆ-ನರ್ಮ್ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿ ನಿವಾಸಿಗಳನ್ನು ಶ್ಯಾದನಹಳ್ಳಿಯ ಗೋಮಾಳಕ್ಕೆ ಸ್ಥಳಾಂತರಿಸಿತು. ಅದನ್ನು ಏಕಲವ್ಯ ನಗರವೆಂದು ಜಿಲ್ಲಾಡಳಿತ ಘೋಷಿಸಿದೆ. ಆದರೆ, ಮನೆ ಹಕ್ಕು ಪತ್ರವನ್ನು ನೀಡದೇ ಅಲೆಸುತ್ತಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago