ಮೈಸೂರು

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವೃದ್ದೆ ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಎಂಬುವರಾಗಿದ್ದಾರೆ. ತಿಪ್ಪೂರು ಗ್ರಾಮದ ವೀರಭದ್ರ ಎಂಬ ವ್ಯಕ್ತಿ ವೃದ್ಧೆಯ ಹಣಕ್ಕಾಗಿ ಕೊಲೆಗೈದು ಜೈಲು ಪಾಲಾಗಿದ್ದಾನೆ.

ಕೊಲೆಯಾದ ವೃದ್ಧೆಗೆ ಮೂವರು ಗಂಡು‌ ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದು,‌ಮೂವರು ಕೂಡ‌ ಪ್ರತ್ಯೇಕವಾಗಿ ವಾಸವಾಗಿದ್ದರು ಎನ್ನಲಾಗಿದೆ.

ಘಟನೆ ವಿವರ ;

ವೃದ್ದೆ ಗೌರಮ್ಮಳಿಗೆ ವೀರಭದ್ರ ತೀರ ಪರಿಚಿತನಾಗಿದ್ದು ಬಹಳಷ್ಟು ವಿಶ್ವಾಸ ಗಳಿಸಿದ್ದ. ಆದ್ದರಿಂದ ಗೌರಮ್ಮ ಅವರ ಬ್ಯಾಂಕ್ ಖಾತೆಯಲ್ಲಿನ‌ ಹಣ ಡ್ರಾ ಮಾಡುವುದು, ಇತರೆ ಕೆಲಸವನ್ನು ಮಾಡಿ‌ಕೊಡುತ್ತಿದ್ದು ಈಗ್ಗೆ ಹದಿನೈದು ದಿನಗಳ ಹಿಂದೆ ಗೌರಮ್ಮ ವೀರಭದ್ರನ ಜೊತೆ ಬ್ಯಾಂಕ್ ಹೋಗಿ 75 ಸಾವಿರ ಹಣ ಡ್ರಾ ಮಾಡಿದ್ದಾರೆ.

ಬಳಿಕ ತುರ್ತಾಗಿ ಹಣ ಬೇಕು ಕೊಡಿ ಎಂದು ಗೌರಮ್ಮ ಅವರ ಬಳಿ ಇದ್ದ 75 ಸಾವಿರ ಹಣ ಪಡೆದಿದ್ದಾನೆ. ವಾರ ಕಳೆದ ನಂತರ ಗೌರಮ್ಮ ಹಣ ಕೊಡು ಎಂದು ಕೇಳಿದಾಗ ಕೊಡುತ್ತೇನೆ ಎಂದು ಸಬೂಬು ಹೇಳಿ ರಾತ್ರಿ ವೇಳೆ ವೃದ್ಧೆ ಗೌರಮ್ಮ ಮನೆಗೆ ಹೋಗಿ ಕಪಾಳಕ್ಕೆ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಮನೆಯ ಹಿಂದೆ ಇರುವ ಶೌಚಾಲಯದ ಯುಜಿಡಿ‌ ಗುಂಡಿಗೆ ಹಾಕಿ ಮುಚ್ಷಿದ್ದಾನೆ. ಈತ್ತ ಗೌರಮ್ಮ ಕಾಣದಿರುವ ಬಗ್ಗೆ ಮಕ್ಕಳು ಹುಡುಕಾಟ ನಡೆಸಿದ್ದಾರೆ. ಇದೇ ವೇಳೆಯಲ್ಲಿ ವೀರಭದ್ರ ಕೂಡ ಗ್ರಾಮದಿಂದ ನಾಪತ್ತೆಯಾಗಿರುತ್ತಾನೆ.  ಅನುಮಾನ‌ಗೊಂಡ ಗೌರಮ್ಮನ ಮಕ್ಕಳು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ತನಿಖೆ ಆರಂಭಿಸಿದ ಪೊಲೀಸರು ವೀರಭದ್ರ ಗ್ರಾಮಕ್ಕೆ ಬಂದ‌ ನಂತರ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  ಈ ವೇಳೆ ಹಣಕ್ಕಾಗಿ ಗೌರಮ್ಮ ಅವರನ್ನು ಕೊಲೆಗೈದು, ಶವವನ್ನು ಶೌಚಾಲಯದ ಯುಜಿಡಿ ಗುಂಡಿಗೆ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.  ಬಳಿಕ ಪೊಲೀಸರು ಆರೋಪಿಯನ್ನು  ತಿಪ್ಪೂರು ಗ್ರಾಮಕ್ಕೆ ಕರೆತಂದು  ಶೌಚಾಲಯದ ಯುಜಿಡಿ ಗುಂಡಿಯೊಳಗೆ ಇದ್ದ ಗೌರಮ್ಮಳ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಕೊಲೆ‌ ಆರೋಪಿ ವೀರಭದ್ರನ್ನು ಪಟ್ಟಣದ ಪೊಲೀಸರು ಹೆಚ್ಷಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಸುದ್ದಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಎಎಸ್‌ಪಿ ಮಲ್ಲಿಕ್, ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ತಿಪ್ಪೂರು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago