ಮೈಸೂರು

ಮೈಸೂರು | ವೃದ್ಧೆಯನ್ನು ಬೆದರಿಸಿ 37 ಲಕ್ಷ ರೂ. ವಂಚನೆ : ದೂರು ದಾಖಲು

ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ.

ಜೆ.ಪಿ.ನಗರ ನಿವಾಸಿಯಾದ 73 ವರ್ಷದ ಮಹಿಳೆಗೆ ಜು.12 ರಂದು ವಾಟ್ಸಾಪ್ ಸಂದೇಶ ಕಳುಹಿಸಿ, ಕೆಲವೇ ಕ್ಷಣಗಳಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿದ ವಂಚಕರು, ಮುಂಬೈನಲ್ಲಿರುವ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಯೂನಿಟ್‌ನಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದಾರೆ.

ಸಮವಸ್ತ್ರದಲ್ಲಿದ್ದ ವ್ಯಕ್ತಿ ವಿಡಿಯೋ ಕರೆಯಲ್ಲಿ ಮಾತನಾಡಿದ್ದರಿಂದ ಮಹಿಳೆ ನಂಬಿದ್ದಾರೆ. ಕರೆ ಮಾಡಿದ ಕಾರಣ ಕೇಳಿದಾಗ ಪ್ರಕರಣವೊಂದರ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ, ಬ್ಯಾಂಕ್ ಡೀಟೆಲ್ಸ್ ಫೋಟೋಗಳನ್ನು ಕಳುಹಿಸುವಂತೆ ತಿಳಿಸಿದ್ದಾರೆ.

ವಂಚಕರ ಮಾತು ನಂಬಿದ ಮಹಿಳೆ, ಅವರು ಕೇಳಿದ್ದ ದಾಖಲೆಗಳ ಫೋಟೋ ಕಳುಹಿಸಿದ್ದಾರೆ. ಕೆಲಹೊತ್ತು ಪರಿಶೀಲನೆ ನಾಟಕವಾಡಿದ ವಂಚಕರು, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದು, ಖಾತೆಯನ್ನು ಮನಿ ಲ್ಯಾಂಡ್ರಿಂಗ್‌ಗಾಗಿ ವ್ಯಕ್ತಿಯೊಬ್ಬರಿಗೆ ನೀಡಲಾಗಿದೆ.

ಟೆರರಿಸಂ ಫಂಡ್‌ಗೆ ಹಣ ಬಳಸಿಕೊಳ್ಳಲು ನಿಮ್ಮ ಖಾತೆಗೆ ಪಿಎಫ್‌ಐನಿಂದ ಎರಡೂವರೆ ಕೋಟಿ ರೂ.ಹಣ ಬಂದಿದೆ ಎಂದಿದ್ದಾರೆ. ಇದರಿಂದ ಭಯಗೊಂಡ ಮಹಿಳೆ, ಇದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಪರಿಪರಿಯಾಗಿ ಹೇಳಿದರೂ ಕೇಳದ ವಂಚಕರು, ನಿಮ್ಮ ಮೇಲೆ ಕೇಸ್ ದಾಖಲಾಗಿದ್ದು, ಅರೆಸ್ಟ್ ವಾರೆಂಟ್ ಕೂಡ ಜಾರಿ ಯಾಗಿದೆ ಎಂದು ಹೇಳಿ ಮತ್ತಷ್ಟು ಹೆದರಿಸಿದ್ದಾರೆ.

ಮಹಿಳೆ ಆತಂಕಗೊಂಡು ದಿಕ್ಕು ತೋಚದ್ದನ್ನು ಗಮನಿಸಿದ ವಂಚಕರು ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ವರ್ಗಾವಣೆ ಮಾಡಿದರೆ ವಾಪಸ್ ಜಮೆ ಮಾಡುತ್ತೇವೆ ಎಂದಿದ್ದಾರೆ. ಗಾಬರಿಯಲ್ಲಿದ್ದ ಮಹಿಳೆ ಜು.15, 19, 24 ರಂದು ಹಂತ ಹಂತವಾಗಿ ಒಟ್ಟು 37.82 ಲಕ್ಷ ರೂ. ಜಮೆ ಮಾಡಿ, ಮೋಸ ಹೋಗಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

35 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago