ಮೈಸೂರು

ಮೈಸೂರು | ವೃದ್ಧೆಯನ್ನು ಬೆದರಿಸಿ 37 ಲಕ್ಷ ರೂ. ವಂಚನೆ : ದೂರು ದಾಖಲು

ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ.

ಜೆ.ಪಿ.ನಗರ ನಿವಾಸಿಯಾದ 73 ವರ್ಷದ ಮಹಿಳೆಗೆ ಜು.12 ರಂದು ವಾಟ್ಸಾಪ್ ಸಂದೇಶ ಕಳುಹಿಸಿ, ಕೆಲವೇ ಕ್ಷಣಗಳಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿದ ವಂಚಕರು, ಮುಂಬೈನಲ್ಲಿರುವ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಯೂನಿಟ್‌ನಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದಾರೆ.

ಸಮವಸ್ತ್ರದಲ್ಲಿದ್ದ ವ್ಯಕ್ತಿ ವಿಡಿಯೋ ಕರೆಯಲ್ಲಿ ಮಾತನಾಡಿದ್ದರಿಂದ ಮಹಿಳೆ ನಂಬಿದ್ದಾರೆ. ಕರೆ ಮಾಡಿದ ಕಾರಣ ಕೇಳಿದಾಗ ಪ್ರಕರಣವೊಂದರ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ, ಬ್ಯಾಂಕ್ ಡೀಟೆಲ್ಸ್ ಫೋಟೋಗಳನ್ನು ಕಳುಹಿಸುವಂತೆ ತಿಳಿಸಿದ್ದಾರೆ.

ವಂಚಕರ ಮಾತು ನಂಬಿದ ಮಹಿಳೆ, ಅವರು ಕೇಳಿದ್ದ ದಾಖಲೆಗಳ ಫೋಟೋ ಕಳುಹಿಸಿದ್ದಾರೆ. ಕೆಲಹೊತ್ತು ಪರಿಶೀಲನೆ ನಾಟಕವಾಡಿದ ವಂಚಕರು, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದು, ಖಾತೆಯನ್ನು ಮನಿ ಲ್ಯಾಂಡ್ರಿಂಗ್‌ಗಾಗಿ ವ್ಯಕ್ತಿಯೊಬ್ಬರಿಗೆ ನೀಡಲಾಗಿದೆ.

ಟೆರರಿಸಂ ಫಂಡ್‌ಗೆ ಹಣ ಬಳಸಿಕೊಳ್ಳಲು ನಿಮ್ಮ ಖಾತೆಗೆ ಪಿಎಫ್‌ಐನಿಂದ ಎರಡೂವರೆ ಕೋಟಿ ರೂ.ಹಣ ಬಂದಿದೆ ಎಂದಿದ್ದಾರೆ. ಇದರಿಂದ ಭಯಗೊಂಡ ಮಹಿಳೆ, ಇದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಪರಿಪರಿಯಾಗಿ ಹೇಳಿದರೂ ಕೇಳದ ವಂಚಕರು, ನಿಮ್ಮ ಮೇಲೆ ಕೇಸ್ ದಾಖಲಾಗಿದ್ದು, ಅರೆಸ್ಟ್ ವಾರೆಂಟ್ ಕೂಡ ಜಾರಿ ಯಾಗಿದೆ ಎಂದು ಹೇಳಿ ಮತ್ತಷ್ಟು ಹೆದರಿಸಿದ್ದಾರೆ.

ಮಹಿಳೆ ಆತಂಕಗೊಂಡು ದಿಕ್ಕು ತೋಚದ್ದನ್ನು ಗಮನಿಸಿದ ವಂಚಕರು ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ವರ್ಗಾವಣೆ ಮಾಡಿದರೆ ವಾಪಸ್ ಜಮೆ ಮಾಡುತ್ತೇವೆ ಎಂದಿದ್ದಾರೆ. ಗಾಬರಿಯಲ್ಲಿದ್ದ ಮಹಿಳೆ ಜು.15, 19, 24 ರಂದು ಹಂತ ಹಂತವಾಗಿ ಒಟ್ಟು 37.82 ಲಕ್ಷ ರೂ. ಜಮೆ ಮಾಡಿ, ಮೋಸ ಹೋಗಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago