ಮೈಸೂರು

ಮೈಸೂರು | ವೃದ್ಧೆಯನ್ನು ಬೆದರಿಸಿ 37 ಲಕ್ಷ ರೂ. ವಂಚನೆ : ದೂರು ದಾಖಲು

ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ.

ಜೆ.ಪಿ.ನಗರ ನಿವಾಸಿಯಾದ 73 ವರ್ಷದ ಮಹಿಳೆಗೆ ಜು.12 ರಂದು ವಾಟ್ಸಾಪ್ ಸಂದೇಶ ಕಳುಹಿಸಿ, ಕೆಲವೇ ಕ್ಷಣಗಳಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿದ ವಂಚಕರು, ಮುಂಬೈನಲ್ಲಿರುವ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಯೂನಿಟ್‌ನಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದಾರೆ.

ಸಮವಸ್ತ್ರದಲ್ಲಿದ್ದ ವ್ಯಕ್ತಿ ವಿಡಿಯೋ ಕರೆಯಲ್ಲಿ ಮಾತನಾಡಿದ್ದರಿಂದ ಮಹಿಳೆ ನಂಬಿದ್ದಾರೆ. ಕರೆ ಮಾಡಿದ ಕಾರಣ ಕೇಳಿದಾಗ ಪ್ರಕರಣವೊಂದರ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ, ಬ್ಯಾಂಕ್ ಡೀಟೆಲ್ಸ್ ಫೋಟೋಗಳನ್ನು ಕಳುಹಿಸುವಂತೆ ತಿಳಿಸಿದ್ದಾರೆ.

ವಂಚಕರ ಮಾತು ನಂಬಿದ ಮಹಿಳೆ, ಅವರು ಕೇಳಿದ್ದ ದಾಖಲೆಗಳ ಫೋಟೋ ಕಳುಹಿಸಿದ್ದಾರೆ. ಕೆಲಹೊತ್ತು ಪರಿಶೀಲನೆ ನಾಟಕವಾಡಿದ ವಂಚಕರು, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದು, ಖಾತೆಯನ್ನು ಮನಿ ಲ್ಯಾಂಡ್ರಿಂಗ್‌ಗಾಗಿ ವ್ಯಕ್ತಿಯೊಬ್ಬರಿಗೆ ನೀಡಲಾಗಿದೆ.

ಟೆರರಿಸಂ ಫಂಡ್‌ಗೆ ಹಣ ಬಳಸಿಕೊಳ್ಳಲು ನಿಮ್ಮ ಖಾತೆಗೆ ಪಿಎಫ್‌ಐನಿಂದ ಎರಡೂವರೆ ಕೋಟಿ ರೂ.ಹಣ ಬಂದಿದೆ ಎಂದಿದ್ದಾರೆ. ಇದರಿಂದ ಭಯಗೊಂಡ ಮಹಿಳೆ, ಇದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಪರಿಪರಿಯಾಗಿ ಹೇಳಿದರೂ ಕೇಳದ ವಂಚಕರು, ನಿಮ್ಮ ಮೇಲೆ ಕೇಸ್ ದಾಖಲಾಗಿದ್ದು, ಅರೆಸ್ಟ್ ವಾರೆಂಟ್ ಕೂಡ ಜಾರಿ ಯಾಗಿದೆ ಎಂದು ಹೇಳಿ ಮತ್ತಷ್ಟು ಹೆದರಿಸಿದ್ದಾರೆ.

ಮಹಿಳೆ ಆತಂಕಗೊಂಡು ದಿಕ್ಕು ತೋಚದ್ದನ್ನು ಗಮನಿಸಿದ ವಂಚಕರು ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ವರ್ಗಾವಣೆ ಮಾಡಿದರೆ ವಾಪಸ್ ಜಮೆ ಮಾಡುತ್ತೇವೆ ಎಂದಿದ್ದಾರೆ. ಗಾಬರಿಯಲ್ಲಿದ್ದ ಮಹಿಳೆ ಜು.15, 19, 24 ರಂದು ಹಂತ ಹಂತವಾಗಿ ಒಟ್ಟು 37.82 ಲಕ್ಷ ರೂ. ಜಮೆ ಮಾಡಿ, ಮೋಸ ಹೋಗಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

18 mins ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

51 mins ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

2 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

5 hours ago