ಮೈಸೂರು

ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು: ಡಾ ಕೆ.ವಿ.ರಾಜೇಂದ್ರ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಹಂತದ ಅಧಿಕಾರಿಗಳಿಗೆ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಮಾತನಾಡಿದರು.

FS, SST, VST, VVT ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆ ಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು ಎಂದರು.

ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಹೆಚ್ಚು ಗಮನ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ದಾಖಲಿಸಿ ಇಟ್ಟುಕೊಂಡು ಕಾಲಕಾಲಕ್ಕೆ ಈ ಕುರಿತು ವರದಿಯನ್ನು ಕಳುಹಿಸಬೇಕು ಎಂದರು.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಸಿ ತಂಡಗಳು ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಒಟ್ಟಾರೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ , ಫ್ಲೆಕ್ಸ್ ಹಾಗೂ ವಿವಿಧ ಇಲಾಖೆಗಳ ವೆಬ್ ಸೈಟ್ ಗಳನ್ನು ಪಟ್ಟಿ ಮಾಡಿಕೊಂಡು ವೆಬ್ ಸೈಟ್ ಗಳಲ್ಲಿರುವ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು‌.

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಈ ಹಿಂದೆ ಯಾವ ಮತಗಟ್ಟೆ ಕಟ್ಟಡಗಳಲ್ಲಿ ಸೌಲಭ್ಯ ಇದೆ. ಯಾವ ಕಟ್ಟಡಗಳಲ್ಲಿ ಇಲ್ಲ ಎಂಬ ಬಗ್ಗೆ ಪಟ್ಟಿ ಮಾಡಿ ಮೂಲಸೌಕರ್ಯ ಕಲ್ಪಿಸಬೇಕು. ಆ ಪ್ರಕಾರ ಶೌಚಾಲಯ, ರಾರ‍ಯಂಪ್‌ ನಿರ್ಮಾಣ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.

ಚೆಕ್‌ಪೋಸ್ಟ್‌ ಸ್ಥಾಪನೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಈಗಲೇ ಕಾರ್ಯಪ್ರವೃತ್ತವಾಗಬೇಕು ಹಾಗೂ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಚುನಾವಣೆ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಇಡೀ ತಂಡವಾಗಿ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸಿದರೆ ಯಶಸ್ವಿಯಾಗಲು ಸಾಧ್ಯವಾಗಲಿದೆ. ಹಾಗಾಗಿ ಪ್ರತಿಯೊಬ್ಬರೂ ನಿಯೋಜಿಸಿದ ಕರ್ತವ್ಯವನ್ನು ಯಾವುದೇ ಲೋಪ ಇಲ್ಲದೆ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿನೇಶ್, ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯ ಆಯುಕ್ತರಾದ ದೇವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago