ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಡಾ ಜೆ.ಸಿ. ಪ್ರಕಾಶ್ ಮತ ಎಣಿಕೆ ತರಬೇತಿಯಲ್ಲಿ ತಿಳಿಸಿದರು.
ಇಂದು (ಮೇ 31) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಸಿಬ್ಬಂದಿಗೆ ಮತ ಎಣಿಕೆ ತರಬೇತಿಯನ್ನು ಕುರಿತು ಅವರು ಮಾತನಾಡಿದರು.
ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಒಟ್ಟು 14, ನೈಋತ್ಯ ಶಿಕ್ಷಕರ ಕ್ಷೇತ್ರದ ಒಟ್ಟು 14 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಾದ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯದ ಒಟ್ಟು 14 ಕೌಂಟಿoಗ್ ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹ ಪಾಲ್ಗೊಂಡು ಎಣಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.
ಇದು ಬ್ಯಾಲೆಟ್ ಪೇಪರ್ ಮತದಾನ ಪ್ರಕ್ರಿಯೆ ಆಗಿದ್ದು, ಅದರ ವ್ಯಾಲಿಡ್ ಮತ್ತು ಇನ್ ವ್ಯಾಲಿಡ್ ಮತಪತ್ರದ ಬಗ್ಗೆ ಮಾಹಿತಿ ನೀಡಿದರು. ಬ್ಯಾಲೆಟ್ ಪೇಪರ್ ಗಳನ್ನು ಯಾವ ರೀತಿ ತೆರೆಯಬೇಕು, ಯಾವುದು ವ್ಯಾಲಿಡ್, ಯಾವುದು ವ್ಯಾಲಿಡ್ ಅಲ್ಲ ಎಂಬುದನ್ನು ಯಾವ ರೀತಿ ಗುರುತಿಸಬೇಕು. ಸಂಖ್ಯೆಗಳನ್ನು ಯಾವ ರೀತಿ ಕೊಡಬೇಕು. ಯಾವುದನ್ನು ರಿಜೆಕ್ಷನ್ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ ಯಾವುದುದಾದರೂ ಗೊಂದಲದ ಪರಿಸ್ಥಿತಿ ಬಂದಲ್ಲಿ ಆರ್.ಓ ಗಮನಕ್ಕೆ ತರಬೇಕು ಎಂದು ಮತ ಎಣಿಕೆ ತರಬೇತುದಾರರಿಗೆ ಸಲಹೆ ನೀಡಿದರು.
ಮತ ಎಣಿಕೆ ಸಿಬ್ಬಂದಿಗಳು ಮತ ಎಣಿಕೆಯ ದಿನ ಬೆಳಿಗ್ಗೆ 7 ಗಂಟೆಗೆ ಹಾಜರಿರಬೇಕು. ಇದು ಬಹಳ ಸುಲಭದ ಕೆಲಸವಾಗಿದ್ದು, ಮತ ಪತ್ರ ಎಣಿಕೆ ಮಾಡಿ 25 ಬ್ಯಾಲೆಟ್ ಪೇಪರ್ ಗಳ ಒಂದು ಬಂಡೆಲ್ ಮಾಡಿ, ಅದಲ್ಲಿ ಮೊದಲ ಆದ್ಯತೆಯ ಬ್ಯಾಲೆಟ್ ಪೇಪರ್ಗಳನ್ನು ಬೇರ್ಪಡಿಸಿ ಕೊಡಬೇಕು ಎಂದು ತಿಳಿಸಿದರು.
ಪ್ರಾದೇಶಿಕ ಕಚೇರಿಯ ಸಹಾಯಕ ಚುನಾವಣಾಧಿಕಾರಿಗಳಾದ ಕವಿತಾ ರಾಜಾರಾಂ ಅವರು ಮಾತನಾಡಿ, ಚುನಾವಣೆಯ ದಿನ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ನಿಮ್ಮ ಐಡಿ ಕಾರ್ಡ್ ಗಳನ್ನು ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು.
ಮತಗಟ್ಟೆಯ ಕ್ಷೇತ್ರಗಳ ಬಳಿ ಕೌಂಟಿoಗ್ ಸೂಪರ್ವೈಸರ್, ಕೌಂಟಿoಗ್ ಅಸಿಸ್ಟೆಂಟ್ಸ್, ಕೌಂಟಿoಗ್ ಏಜೆಂಟ್ಸ್ ಗಳಿಗೆ ಮಾತ್ರ ಪ್ರವೇಶ ನೀಡಬೇಕು. ತರಬೇತುದಾರರು ಮತಗಟ್ಟೆ ಒಳಗೆ ಮೊಬೈಲ್ ನ್ನು ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಚುನಾವಣಾಧಿಕಾರಿಗಳ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…