ಮೈಸೂರು

ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು – ಡಾ ಜೆ.ಸಿ.ಪ್ರಕಾಶ

ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಡಾ ಜೆ.ಸಿ. ಪ್ರಕಾಶ್  ಮತ ಎಣಿಕೆ ತರಬೇತಿಯಲ್ಲಿ ತಿಳಿಸಿದರು.

ಇಂದು (ಮೇ 31) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಸಿಬ್ಬಂದಿಗೆ ಮತ ಎಣಿಕೆ ತರಬೇತಿಯನ್ನು ಕುರಿತು ಅವರು ಮಾತನಾಡಿದರು.

ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಒಟ್ಟು 14, ನೈಋತ್ಯ ಶಿಕ್ಷಕರ ಕ್ಷೇತ್ರದ ಒಟ್ಟು 14 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಾದ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯದ ಒಟ್ಟು 14 ಕೌಂಟಿoಗ್ ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹ ಪಾಲ್ಗೊಂಡು ಎಣಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.

ಇದು ಬ್ಯಾಲೆಟ್ ಪೇಪರ್ ಮತದಾನ ಪ್ರಕ್ರಿಯೆ ಆಗಿದ್ದು, ಅದರ ವ್ಯಾಲಿಡ್ ಮತ್ತು ಇನ್ ವ್ಯಾಲಿಡ್ ಮತಪತ್ರದ ಬಗ್ಗೆ ಮಾಹಿತಿ ನೀಡಿದರು. ಬ್ಯಾಲೆಟ್ ಪೇಪರ್ ಗಳನ್ನು ಯಾವ ರೀತಿ ತೆರೆಯಬೇಕು, ಯಾವುದು ವ್ಯಾಲಿಡ್, ಯಾವುದು ವ್ಯಾಲಿಡ್ ಅಲ್ಲ ಎಂಬುದನ್ನು ಯಾವ ರೀತಿ ಗುರುತಿಸಬೇಕು. ಸಂಖ್ಯೆಗಳನ್ನು ಯಾವ ರೀತಿ ಕೊಡಬೇಕು. ಯಾವುದನ್ನು ರಿಜೆಕ್ಷನ್ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ ಯಾವುದುದಾದರೂ ಗೊಂದಲದ ಪರಿಸ್ಥಿತಿ ಬಂದಲ್ಲಿ ಆರ್.ಓ ಗಮನಕ್ಕೆ ತರಬೇಕು ಎಂದು ಮತ ಎಣಿಕೆ ತರಬೇತುದಾರರಿಗೆ ಸಲಹೆ ನೀಡಿದರು.

ಮತ ಎಣಿಕೆ ಸಿಬ್ಬಂದಿಗಳು ಮತ ಎಣಿಕೆಯ ದಿನ ಬೆಳಿಗ್ಗೆ 7 ಗಂಟೆಗೆ ಹಾಜರಿರಬೇಕು. ಇದು ಬಹಳ ಸುಲಭದ ಕೆಲಸವಾಗಿದ್ದು, ಮತ ಪತ್ರ ಎಣಿಕೆ ಮಾಡಿ 25 ಬ್ಯಾಲೆಟ್ ಪೇಪರ್ ಗಳ ಒಂದು ಬಂಡೆಲ್ ಮಾಡಿ, ಅದಲ್ಲಿ ಮೊದಲ ಆದ್ಯತೆಯ ಬ್ಯಾಲೆಟ್ ಪೇಪರ್‌ಗಳನ್ನು ಬೇರ್ಪಡಿಸಿ ಕೊಡಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಕಚೇರಿಯ ಸಹಾಯಕ ಚುನಾವಣಾಧಿಕಾರಿಗಳಾದ ಕವಿತಾ ರಾಜಾರಾಂ ಅವರು ಮಾತನಾಡಿ, ಚುನಾವಣೆಯ ದಿನ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ನಿಮ್ಮ ಐಡಿ ಕಾರ್ಡ್ ಗಳನ್ನು ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಮತಗಟ್ಟೆಯ ಕ್ಷೇತ್ರಗಳ ಬಳಿ ಕೌಂಟಿoಗ್ ಸೂಪರ್ವೈಸರ್, ಕೌಂಟಿoಗ್ ಅಸಿಸ್ಟೆಂಟ್ಸ್, ಕೌಂಟಿoಗ್ ಏಜೆಂಟ್ಸ್ ಗಳಿಗೆ ಮಾತ್ರ ಪ್ರವೇಶ ನೀಡಬೇಕು. ತರಬೇತುದಾರರು ಮತಗಟ್ಟೆ ಒಳಗೆ ಮೊಬೈಲ್ ನ್ನು ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಚುನಾವಣಾಧಿಕಾರಿಗಳ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

8 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

9 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

9 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

10 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

10 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

13 hours ago