ಮೈಸೂರು

ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ : ಡಿಸಿಎಂ ಡಿ.ಕೆ ಶಿವಕುಮಾರ್

ಮೈಸೂರು : ಗ್ರೇಟರ್‌ ಬೆಂಗಳೂರಿಗೆ ಶೀಘ್ರವೆ ಚುನಾವಣೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗರಾರೊಂದಿಗೆ ಮಾತನಾಡಿ ಅವರು, ಗ್ರೇಟರ್‌ ಬೆಂಗಳೂರಿಗೆ ಕ್ಯಾಬಿನೆಟ್ ನಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಪ್ಪಿದ್ದಾರೆ. ಹೀಗಾಘಿ ಶೀಘ್ರವೇ ಸಬ್‌ ಕಮಿಟಿ ಮಾಡಿ ಚುನಾವಣೆ ನಡೆಸುತ್ತೇವೆ ಎಂದರು.

ಗ್ರೇಟರ್ ಬೆಂಗಳೂರು ಅಲ್ಲ ಕ್ವಾಟರ್ ಬೆಂಗಳೂರು ಎಂಬ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊದಲೇ ವಿರೋಧ ಮಾಡಬಹುದಿತ್ತು. ಆದರೆ ಅಶೋಕ್ ಮಾಡಲಿಲ್ಲ. ವಿಪಕ್ಷ ನಾಯಕನಾಗಿ ಅಷ್ಟು ಟೀಕೆ ಮಾಡದಿದ್ರೆ ಹೇಗೆ. ಅವರಿಗೆ ನಾವು ಗೌರವ ಕೊಡ್ತೀವಿ. ಆದ್ರೆ ಅವರೇ ಗ್ರೇಟರ್ ಬೆಂಗಳೂರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಯಾಕೆ ಕೊಟ್ರು ? ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ಇವರೆಲ್ಲರೂ ಒಪ್ಪಿದ್ದಾರೆ. ಈಗ ವಿಪಕ್ಷವಾಗಿ ಟೀಕೆ ಮಾಡ್ತಾರೆ.
ಅವರ ಕೆಲಸ ಅವರು ಮಾಡಲಿ ಎಂದು ಹೇಳಿದರು.

ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಕೂಡ ಶೀಘ್ರವೇ ಆಗುತ್ತದೆ. ಶುಭ ಗಳಿಗೆ ಶುಭ ಮುಹೂರ್ತ ಬರ್ತಾ ಇದೆ ಎಂದು ಪರೋಕ್ಷವಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago