ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.
ಮಂಚೂನಾಯಕ ಎಂಬುವವನೇ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಕಿಡಿಕಾರಿದ್ದು, ವಿದ್ಯುತ್ ತಂತಿ ತುಂಡಾಗಿ ಎರಡು ದಿನ ಕಳೆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ದಿನಗಳಿಂದ ಹಲವಾರು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಗಮನ ಹರಿಸಿಲ್ಲ. ಲೈನ್ಮನ್ ವಸಂತ್ ಎಂಬಾತನ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಿದ್ಯುತ್ ಇಲಾಖೆಯ ಅಧಿಕಾರಿಗಳು, ಇಲಾಖೆಯಿಂದ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಇದಲ್ಲದೇ ಕುಟುಂಬದ ಒಬ್ಬ ವ್ಯಕ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವ ಭರವಸೆ ನೀಡಿದ್ದು, ನಿರ್ಲಕ್ಷ್ಯಕ್ಕೆ ಕಾರಣರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇದಕ್ಕೆ ಒಪ್ಪದ ಗ್ರಾಮಸ್ಥರು ವಿದ್ಯುತ್ ಇಲಾಖೆಯಲ್ಲಿ ಕುಟುಂಬದ ಒಬ್ಬರಿಗೆ ಶಾಶ್ವತ ಕೆಲಸ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…