ಮೈಸೂರು

ವಿದ್ಯುತ್ ದರ ಏರಿಕೆ : ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಪ್ರಮುಖವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

ವಿದುತ್ ದರ ಏರಿಕೆ ಹಿನ್ನೆಲೆಯಲ್ಲಿ ಜನ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿರುವ ತನ್ವೀರ್ ಸೇಠ್, ಸರ್ಕಾರ ಈ ವಿಚಾರದತ್ತ ಗಮನ ಹರಿಸಲು ಕೋರಿಕೊಂಡಿದ್ದಾರೆ. ಅವರ ಪತ್ರದ ಸಾರಾಂಶ ಈ ಕೆಳಗಿನಂತಿದೆ.
ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದರ ವಿರುದ್ಧ ರಾಜ್ಯದ ಜನ ಹೈರಾಣಾಗಿ ಸರ್ಕಾರ ಮತ್ತು ಎಸ್ಕಾಂಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ.

ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಮರು ಪರಿಶೀಲನೆ ಮಾಡಿ, ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಪರಿಶೀಲಿಸಿ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಮರು ಜಾರಿಗೊಳಿಸಿ ಎಂದು ಕೇಳಿಕೊಂಡಿದ್ದಾರೆ.

lokesh

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

59 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

1 hour ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

1 hour ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

1 hour ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

1 hour ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

2 hours ago