ಮೈಸೂರು: ಸಂಡೇ ಸ್ಫೋರ್ಟ್ಸ್ ಕ್ಲಬ್ನ ವಾರ್ಷಿಕೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಚೆಸ್ಕಾಂ) ದ ಸಹಭಾಗಿತ್ವದಲ್ಲಿ ಭಾನುವಾರ ನಡೆದ ವಿದ್ಯುತ್ ಸುರಕ್ಷತಾ ಕುರಿತ ಜಾಗೃತಿ ಓಟ ಮ್ಯಾರಥಾನ್ನಲ್ಲಿ ನೂರಾರು ಜನ ಭಾಗಿಯಾಗಿದ್ದರು.
ನಗರದ ಓವಲ್ ಮೈದಾನದಲ್ಲಿ ನಡೆದ ಸುರಕ್ಷತಾ ಓಟದಲ್ಲಿ ಸಾವಿರಕ್ಕೂ ಹೆಚ್ಚು ಜನರು ಆಸಕ್ತಿಯಿಂದ ಭಾಗಿಯಾಗಿದರು.
10ಕಿ.ಮೀ ಓಟವು ಓವಲ್ ಮೈದಾನದಿಂದ ಪ್ರಾರಂಭವಾಗಿ ಹುಣಸೂರು ರಸ್ತೆ ಮೂಲಕ ಪ್ರೀಮಿಯರ್ ಸ್ಟೋಡಿಯೊ, ಜೆ.ಸಿ ಕಾಲೇಜು ರಸ್ತೆ, ಬೋಗಾದಿ, ಕುಕ್ಕರಹಳ್ಳಿ ರಸ್ತೆ ದಾಟಿ ರಾಮಸ್ವಾಮಿ ಸರ್ಕಲ್ ಮೂಲಕ ಓವಲ್ ಮೈದಾನ ತಲುಪಿತು. ಇನ್ನೂ 3 ಕಿ.ಮೀ ಓಟದಲ್ಲಿ ಓವಲ್ ಮೈದಾನದಿಂದ ಹುಣಸೂರು ರಸ್ತೆ ಮೂಲಕ ಕುಕ್ಕರಹಳ್ಳಿ ರಸ್ತೆ, ಫೈರ್ ಬ್ರಿ ಗೇಡ್ ರಸ್ತೆ, ರಾಮಸ್ವಾಮಿ ರಸ್ತೆ ಮೂಲಕ ಮೈದಾನ ತಲುಪಿತು.
ಮ್ಯಾರಥಾನ್ಗೆ ಚಾಲನೆ ನೀಡಿ ಶುಭಕೋರಿದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ ಸೆಸ್ಕ್ ಸುರಕ್ಷತೆಗಾಗಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ವಿದ್ಯುತ್ ಅವಘಡದ ಪರಿಣಾಮ ಕುರಿತು ಮುನ್ನೆಚ್ಚರಿಕೆ ಇರಬೇಕು. ಯಾವುದೇ ರೀತಿಯ ಅವಘಡವಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶೀಲಾ.ಜಿ ಸೇರಿದಂತೆ ಚೆಸ್ಕಾಂ ಸಿಬ್ಬಂದಿ ಹಾಗೂ ಇತರರು ಪಾಲ್ಗೊಂಡಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…