ಮೈಸೂರು

ಮೈಸೂರಲ್ಲಿ ವಿದ್ಯುತ್‌ ಸುರಕ್ಷತಾ ಓಟ: ನೂರಾರು ಜನ ಭಾಗಿ

ಮೈಸೂರು: ಸಂಡೇ ಸ್ಫೋರ್ಟ್ಸ್‌ ಕ್ಲಬ್‌ನ ವಾರ್ಷಿಕೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಚೆಸ್ಕಾಂ) ದ ಸಹಭಾಗಿತ್ವದಲ್ಲಿ ಭಾನುವಾರ ನಡೆದ ವಿದ್ಯುತ್‌ ಸುರಕ್ಷತಾ ಕುರಿತ ಜಾಗೃತಿ ಓಟ ಮ್ಯಾರಥಾನ್‌ನಲ್ಲಿ ನೂರಾರು ಜನ ಭಾಗಿಯಾಗಿದ್ದರು.

ನಗರದ ಓವಲ್‌ ಮೈದಾನದಲ್ಲಿ ನಡೆದ ಸುರಕ್ಷತಾ ಓಟದಲ್ಲಿ ಸಾವಿರಕ್ಕೂ ಹೆಚ್ಚು ಜನರು ಆಸಕ್ತಿಯಿಂದ ಭಾಗಿಯಾಗಿದರು.

10ಕಿ.ಮೀ ಓಟವು ಓವಲ್‌ ಮೈದಾನದಿಂದ ಪ್ರಾರಂಭವಾಗಿ ಹುಣಸೂರು ರಸ್ತೆ ಮೂಲಕ ಪ್ರೀಮಿಯರ್‌ ಸ್ಟೋಡಿಯೊ, ಜೆ.ಸಿ ಕಾಲೇಜು ರಸ್ತೆ, ಬೋಗಾದಿ, ಕುಕ್ಕರಹಳ್ಳಿ ರಸ್ತೆ ದಾಟಿ ರಾಮಸ್ವಾಮಿ ಸರ್ಕಲ್‌ ಮೂಲಕ ಓವಲ್‌ ಮೈದಾನ ತಲುಪಿತು. ಇನ್ನೂ 3 ಕಿ.ಮೀ ಓಟದಲ್ಲಿ ಓವಲ್‌ ಮೈದಾನದಿಂದ ಹುಣಸೂರು ರಸ್ತೆ ಮೂಲಕ ಕುಕ್ಕರಹಳ್ಳಿ ರಸ್ತೆ, ಫೈರ್‌ ಬ್ರಿ ಗೇಡ್‌ ರಸ್ತೆ, ರಾಮಸ್ವಾಮಿ ರಸ್ತೆ ಮೂಲಕ ಮೈದಾನ ತಲುಪಿತು.

ಮ್ಯಾರಥಾನ್‌ಗೆ ಚಾಲನೆ ನೀಡಿ ಶುಭಕೋರಿದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷ ರಮೇಶ್‌ ಬಾಬು ಬಂಡಿಸಿದ್ದೇಗೌಡ ಸೆಸ್ಕ್‌ ಸುರಕ್ಷತೆಗಾಗಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್‌ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ವಿದ್ಯುತ್‌ ಅವಘಡದ ಪರಿಣಾಮ ಕುರಿತು ಮುನ್ನೆಚ್ಚರಿಕೆ ಇರಬೇಕು. ಯಾವುದೇ ರೀತಿಯ ಅವಘಡವಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶೀಲಾ.ಜಿ ಸೇರಿದಂತೆ ಚೆಸ್ಕಾಂ ಸಿಬ್ಬಂದಿ ಹಾಗೂ ಇತರರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

8 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

8 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

9 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

9 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

9 hours ago