ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕುವೆಂಪುನಗರ ಬಸ್ ತಂಗುದಾಣದ ಕಬ್ಬಿಣದ ಪೈಪ್ನಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಮುಟ್ಟಿದ ಬಾಲಕ ಕೆಲಕಾಲ ಪೋಷಕರನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ.
ಕುವೆಂಪುನಗರ ಕೆಎಚ್ಬಿ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ಬಸ್ಗಳ ವಾರ್ಗಗಳನ್ನು ತಿಳಿಸಲು ಅಳವಡಿಸಲಾಗಿರುವ ಸೈನ್ ಬೋರ್ಡ್ಗೆ ಪಕ್ಕದಲ್ಲಿಯೇ ಇರುವ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಲಾಗಿದೆ. ತಂಗುದಾಣದ ಕಬ್ಬಿಣದ ಪೈಪ್ಗೆ ವಿದ್ಯುತ್ ವೈರ್ ಸುತ್ತಲಾಗಿದೆ.
ವಿದ್ಯುತ್ ಸೋರಿಕೆಯಿಂದ ಪೈಪ್ನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ವೈರ್ ಅಳವಡಿಸಿರುವುದರಿಂದ ಈಗಾಗಲೇ ಹಲವು ಮಂದಿ ಪೈಪ್ ಮುಟ್ಟಿ ವಿದ್ಯುತ್ ಶಾಕ್ಗೆ ಒಳಗಾಗಿದ್ದಾರೆ. ಕೂರ್ಗಳ್ಳಿ ನಿವಾಸಿ ಗುರುರಾಜ್ ಎಂಬವರು ತಮ್ಮ ಮಗ ಧನ್ವಿತ್ನನ್ನು ನಟನ ರಂಗಶಾಲೆಗೆ ಸೇರಿಸಲು ಕರೆತಂದಿದ್ದರು. ಮಗನ ಫೋಟೋ ಬೇಕಾದ ಕಾರಣ ಕಾಂಪ್ಲೆಕ್ಸ್ ಬಳಿ ಕಾರನ್ನು ನಿಲ್ಲಿಸಿ ತೆರಳಿದ್ದರು.
ಈ ವೇಳೆ ಕಾರಿನಿಂದ ಇಳಿದು ಬಸ್ ತಂಗುದಾಣದ ಬಳಿಗೆ ಬಂದ ಬಾಲಕ ಕಬ್ಬಿಣದ ಪೈಪನ್ನು ಮುಟ್ಟಿದ್ದಾನೆ. ಇದರಿಂದ ಆತನಿಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ಆತ ಕೆಲ ನಿಮಿಷಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.
ಕೂಡಲೇ ಸ್ಥಳೀುಂರು ಧಾವಿಸಿ ಆತನನ್ನು ರಕ್ಷಿಸಿದ್ದಾರೆ. ಬಾಲಕನ ತಂದೆ ಗುರುರಾಜ್ ಅವರು ಮಗನನ್ನು ಆಸ್ಪತ್ರೆಗೆ ಕರೆದೋ್ಂದುು ಚಿಕಿತ್ಸೆ ಕೊಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಆಗಾಗ್ಗೆ ತಂಗುದಾಣದ ಪೈಪ್ ಮುಟ್ಟಿ ಸಾಕಷ್ಟು ಮಂದಿ ಶಾಕ್ಗೆ ಒಳಗಾಗಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ.
ಈಗಲಾದರೂ ಸೆಸ್ಕ್ ಸಿಬ್ಬಂದಿ ಎಚ್ಚೆತ್ತುಕೊಳ್ಳದಿದ್ದಲ್ಲಿ ಅನಾಹುತ ಕಟ್ಟಿಟ್ಟ ಬುತ್ತಿ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…
ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ ಸಂಜೆಯ ವೇಳೆ ಸಾಕಷ್ಟು ಬಸ್ಗಳಿಲ್ಲದೆ…
ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…
ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…
೩೦ ವರ್ಷ ಪ್ರಾಯದ ಸಫುರಾ ಖಾನ್ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…