ಮೈಸೂರು

ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯ : ಬಾಲಕನಿಗೆ ಶಾಕ್‌ !

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕುವೆಂಪುನಗರ ಬಸ್ ತಂಗುದಾಣದ ಕಬ್ಬಿಣದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಮುಟ್ಟಿದ ಬಾಲಕ ಕೆಲಕಾಲ ಪೋಷಕರನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ.

ಕುವೆಂಪುನಗರ ಕೆಎಚ್‌ಬಿ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ಬಸ್‌ಗಳ ವಾರ್ಗಗಳನ್ನು ತಿಳಿಸಲು ಅಳವಡಿಸಲಾಗಿರುವ ಸೈನ್ ಬೋರ್ಡ್‌ಗೆ ಪಕ್ಕದಲ್ಲಿಯೇ ಇರುವ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಲಾಗಿದೆ. ತಂಗುದಾಣದ ಕಬ್ಬಿಣದ ಪೈಪ್‌ಗೆ ವಿದ್ಯುತ್ ವೈರ್ ಸುತ್ತಲಾಗಿದೆ.

ವಿದ್ಯುತ್ ಸೋರಿಕೆಯಿಂದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ವೈರ್ ಅಳವಡಿಸಿರುವುದರಿಂದ ಈಗಾಗಲೇ ಹಲವು ಮಂದಿ ಪೈಪ್ ಮುಟ್ಟಿ ವಿದ್ಯುತ್ ಶಾಕ್‌ಗೆ ಒಳಗಾಗಿದ್ದಾರೆ. ಕೂರ್ಗಳ್ಳಿ ನಿವಾಸಿ ಗುರುರಾಜ್ ಎಂಬವರು ತಮ್ಮ ಮಗ ಧನ್ವಿತ್‌ನನ್ನು ನಟನ ರಂಗಶಾಲೆಗೆ ಸೇರಿಸಲು ಕರೆತಂದಿದ್ದರು. ಮಗನ ಫೋಟೋ ಬೇಕಾದ ಕಾರಣ ಕಾಂಪ್ಲೆಕ್ಸ್ ಬಳಿ ಕಾರನ್ನು ನಿಲ್ಲಿಸಿ ತೆರಳಿದ್ದರು.

ಈ ವೇಳೆ ಕಾರಿನಿಂದ ಇಳಿದು ಬಸ್ ತಂಗುದಾಣದ ಬಳಿಗೆ ಬಂದ ಬಾಲಕ ಕಬ್ಬಿಣದ ಪೈಪನ್ನು ಮುಟ್ಟಿದ್ದಾನೆ. ಇದರಿಂದ ಆತನಿಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ಆತ ಕೆಲ ನಿಮಿಷಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.

ಕೂಡಲೇ ಸ್ಥಳೀುಂರು ಧಾವಿಸಿ ಆತನನ್ನು ರಕ್ಷಿಸಿದ್ದಾರೆ. ಬಾಲಕನ ತಂದೆ ಗುರುರಾಜ್ ಅವರು ಮಗನನ್ನು ಆಸ್ಪತ್ರೆಗೆ ಕರೆದೋ್ಂದುು ಚಿಕಿತ್ಸೆ ಕೊಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಆಗಾಗ್ಗೆ ತಂಗುದಾಣದ ಪೈಪ್ ಮುಟ್ಟಿ ಸಾಕಷ್ಟು ಮಂದಿ ಶಾಕ್‌ಗೆ ಒಳಗಾಗಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ.

ಈಗಲಾದರೂ ಸೆಸ್ಕ್ ಸಿಬ್ಬಂದಿ ಎಚ್ಚೆತ್ತುಕೊಳ್ಳದಿದ್ದಲ್ಲಿ ಅನಾಹುತ ಕಟ್ಟಿಟ್ಟ ಬುತ್ತಿ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

18 mins ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

45 mins ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

47 mins ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

60 mins ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

2 hours ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.…

2 hours ago