ಮೈಸೂರು

ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯ : ಬಾಲಕನಿಗೆ ಶಾಕ್‌ !

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕುವೆಂಪುನಗರ ಬಸ್ ತಂಗುದಾಣದ ಕಬ್ಬಿಣದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಮುಟ್ಟಿದ ಬಾಲಕ ಕೆಲಕಾಲ ಪೋಷಕರನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ.

ಕುವೆಂಪುನಗರ ಕೆಎಚ್‌ಬಿ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ಬಸ್‌ಗಳ ವಾರ್ಗಗಳನ್ನು ತಿಳಿಸಲು ಅಳವಡಿಸಲಾಗಿರುವ ಸೈನ್ ಬೋರ್ಡ್‌ಗೆ ಪಕ್ಕದಲ್ಲಿಯೇ ಇರುವ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಲಾಗಿದೆ. ತಂಗುದಾಣದ ಕಬ್ಬಿಣದ ಪೈಪ್‌ಗೆ ವಿದ್ಯುತ್ ವೈರ್ ಸುತ್ತಲಾಗಿದೆ.

ವಿದ್ಯುತ್ ಸೋರಿಕೆಯಿಂದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ವೈರ್ ಅಳವಡಿಸಿರುವುದರಿಂದ ಈಗಾಗಲೇ ಹಲವು ಮಂದಿ ಪೈಪ್ ಮುಟ್ಟಿ ವಿದ್ಯುತ್ ಶಾಕ್‌ಗೆ ಒಳಗಾಗಿದ್ದಾರೆ. ಕೂರ್ಗಳ್ಳಿ ನಿವಾಸಿ ಗುರುರಾಜ್ ಎಂಬವರು ತಮ್ಮ ಮಗ ಧನ್ವಿತ್‌ನನ್ನು ನಟನ ರಂಗಶಾಲೆಗೆ ಸೇರಿಸಲು ಕರೆತಂದಿದ್ದರು. ಮಗನ ಫೋಟೋ ಬೇಕಾದ ಕಾರಣ ಕಾಂಪ್ಲೆಕ್ಸ್ ಬಳಿ ಕಾರನ್ನು ನಿಲ್ಲಿಸಿ ತೆರಳಿದ್ದರು.

ಈ ವೇಳೆ ಕಾರಿನಿಂದ ಇಳಿದು ಬಸ್ ತಂಗುದಾಣದ ಬಳಿಗೆ ಬಂದ ಬಾಲಕ ಕಬ್ಬಿಣದ ಪೈಪನ್ನು ಮುಟ್ಟಿದ್ದಾನೆ. ಇದರಿಂದ ಆತನಿಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ಆತ ಕೆಲ ನಿಮಿಷಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.

ಕೂಡಲೇ ಸ್ಥಳೀುಂರು ಧಾವಿಸಿ ಆತನನ್ನು ರಕ್ಷಿಸಿದ್ದಾರೆ. ಬಾಲಕನ ತಂದೆ ಗುರುರಾಜ್ ಅವರು ಮಗನನ್ನು ಆಸ್ಪತ್ರೆಗೆ ಕರೆದೋ್ಂದುು ಚಿಕಿತ್ಸೆ ಕೊಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಆಗಾಗ್ಗೆ ತಂಗುದಾಣದ ಪೈಪ್ ಮುಟ್ಟಿ ಸಾಕಷ್ಟು ಮಂದಿ ಶಾಕ್‌ಗೆ ಒಳಗಾಗಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ.

ಈಗಲಾದರೂ ಸೆಸ್ಕ್ ಸಿಬ್ಬಂದಿ ಎಚ್ಚೆತ್ತುಕೊಳ್ಳದಿದ್ದಲ್ಲಿ ಅನಾಹುತ ಕಟ್ಟಿಟ್ಟ ಬುತ್ತಿ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

22 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

22 hours ago