ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ ಎರಡು ಕಾಡಾನೆಗಳು ರೈತರು ಜಮೀನುಗಳಲ್ಲಿ ಬೆಳೆದಿದ್ದ ಕಬ್ಬು, ಶುಂಠಿ, ಬಾಳೆ, ತೆಂಗು ಸೇರಿದಂತೆ ಹಲವು ಬೆಳೆಗಳನ್ನು ತುಳಿದು ನಾಶ ಮಾಡಿವೆ.
ಇದರ ಜೊತೆಗೆ ಜಮೀನಿನಲ್ಲಿದ್ದ ಕೃಷಿ ಪರಿಕರಗಳನ್ನು ಸಹ ನಾಶ ಮಾಡಿದ್ದು, ರೈತರು ಕಂಗಾಲಾಗುವಂತೆ ಮಾಡಿವೆ.
ಆನೆಗಳ ದಾಳಿಯಿಂದ ತೀವ್ರ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ಈ ಕಾಡಾನೆಗಳು ನಾಡಿನಲ್ಲಿ ಭಾರೀ ಪ್ರಮಾಣದ ನಷ್ಟ ಉಂಟುಮಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿವೆ.
ಈ ಹಿನ್ನೆಲೆಯಲ್ಲಿ ಇನ್ನಾದರೂ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…