ಮೈಸೂರು : ವಿಶ್ವ ಆನೆ ದಿನವೇ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಸಾಕಾನ ಶಿಬಿರದ ಕ್ರಾಲ್ ನಲ್ಲಿ ಪಳಗಿಸಲಾಗುತ್ತಿದ್ದ ಸುಮಾರು 50ವರ್ಷ ಪ್ರಾಯದ ಸುಬ್ರಮಣಿ ಎಂಬ ಗಂಡಾನೆ ಸಾವನ್ನಪ್ಪಿದೆ.
ಸುಬ್ರಮಣಿ ಎಂಬ ಗಂಡಾನೆಯನ್ನು ಕ್ರಾಲ್ನಲ್ಲಿ ಪಳಗಿಸಲಾಗುತ್ತಿದ್ದು, ಕಳೆದ ಜುಲೈ 20ರಂದು ಹೆಚ್ಚಿನ ತರಬೇತಿಗಾಗಿ ಕ್ರಾಲ್ ಹೊರಗಡೆ ತಂದು ತರಬೇತಿ ನೀಡಲಾಗುತ್ತಿತ್ತು. ಆದರೆ ಆ.11ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸುಸ್ತಾಗಿರುವಂತೆ ಆನೆ ಮಲಗಿಕೊಂಡಿದೆ. ಮಲಗಿದ್ದ ಆನೆಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿ ಮೇಲೇಳಿಸಲು ಪ್ರಯತ್ನಿಸಲಾಗಿದ್ದರೂ ಆನೆಯು ಮೇಲೇಳಲಿಲ್ಲ. ಬಳಿಕ ಕ್ರೇನ್ ಸಹಾಯದಿಂದ ಎದ್ದು ನಿಲ್ಲಿಸಲು ಪ್ರಯತ್ನಿಸಲಾಗಿದರೂ ಎದ್ದು ನಿಲ್ಲಲಾಗದ ಸುಬ್ರಮಣಿ ವಿಶ್ವ ಆನೆ ದಿನದಂದೆ ಮದ್ಯಾಹ್ನ 3.15 ರ ಸಮಯದಲ್ಲಿ ಮೃತಪಟ್ಟಿರುತ್ತದೆ.
ಸುಬ್ರಮಣಿ ಆನೆಯು ಬಹುಅಂಗಾಂಗಳ ವೈಫಲ್ಯದಿಂದ ಬಳಲಿ ಸಾವನ್ನಪ್ಪಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಕಳೇಬರವನ್ನು ಮಣ್ಣಿನಲ್ಲಿ ಹೂತು ಹಾಕಲಾಯಿತು.
ಸ್ಥಳದಲ್ಲಿ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್, ಪಶು ವೈದ್ಯರಾದ ಡಾ.ಚಿಟ್ಟಿಯಪ್ಪ, ಡಾ.ಮದನ್ ಗೋಪಾಲ್, ಡಾ.ಹೆಚ್.ರಮೇಶ, ವಲಯ ಅರಣ್ಯಾಧಿಕಾರಿಗಳು, ಆನೆಶಿಬಿರದ ಸಿಬ್ಬಂದಿ ಸೇರಿದಂತೆ ಮುಂತಾದವರು ಹಾಜರಿದ್ದರು.
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…