ಮೈಸೂರು

ಮತ್ತಿಗೋಡು ಆನೆ ಶಿಬಿರದಲ್ಲಿ ಬಹು ಅಂಗಾಗ ವೈಫಲ್ಯದಿಂದ ಆನೆ ಸಾವು

ಮೈಸೂರು : ವಿಶ್ವ ಆನೆ ದಿನವೇ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಸಾಕಾನ ಶಿಬಿರದ ಕ್ರಾಲ್ ನಲ್ಲಿ ಪಳಗಿಸಲಾಗುತ್ತಿದ್ದ ಸುಮಾರು 50ವರ್ಷ ಪ್ರಾಯದ ಸುಬ್ರಮಣಿ ಎಂಬ ಗಂಡಾನೆ ಸಾವನ್ನಪ್ಪಿದೆ. 

ಸುಬ್ರಮಣಿ ಎಂಬ ಗಂಡಾನೆಯನ್ನು ಕ್ರಾಲ್ನಲ್ಲಿ ಪಳಗಿಸಲಾಗುತ್ತಿದ್ದು, ಕಳೆದ ಜುಲೈ 20ರಂದು ಹೆಚ್ಚಿನ ತರಬೇತಿಗಾಗಿ ಕ್ರಾಲ್ ಹೊರಗಡೆ ತಂದು ತರಬೇತಿ ನೀಡಲಾಗುತ್ತಿತ್ತು. ಆದರೆ ಆ.11ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸುಸ್ತಾಗಿರುವಂತೆ ಆನೆ ಮಲಗಿಕೊಂಡಿದೆ. ಮಲಗಿದ್ದ ಆನೆಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿ ಮೇಲೇಳಿಸಲು ಪ್ರಯತ್ನಿಸಲಾಗಿದ್ದರೂ ಆನೆಯು ಮೇಲೇಳಲಿಲ್ಲ. ಬಳಿಕ ಕ್ರೇನ್ ಸಹಾಯದಿಂದ ಎದ್ದು ನಿಲ್ಲಿಸಲು ಪ್ರಯತ್ನಿಸಲಾಗಿದರೂ ಎದ್ದು ನಿಲ್ಲಲಾಗದ ಸುಬ್ರಮಣಿ ವಿಶ್ವ ಆನೆ ದಿನದಂದೆ ಮದ್ಯಾಹ್ನ 3.15 ರ ಸಮಯದಲ್ಲಿ ಮೃತಪಟ್ಟಿರುತ್ತದೆ. 

ಸುಬ್ರಮಣಿ ಆನೆಯು ಬಹುಅಂಗಾಂಗಳ ವೈಫಲ್ಯದಿಂದ ಬಳಲಿ ಸಾವನ್ನಪ್ಪಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಕಳೇಬರವನ್ನು ಮಣ್ಣಿನಲ್ಲಿ ಹೂತು ಹಾಕಲಾಯಿತು.

ಸ್ಥಳದಲ್ಲಿ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್, ಪಶು ವೈದ್ಯರಾದ ಡಾ.ಚಿಟ್ಟಿಯಪ್ಪ, ಡಾ.ಮದನ್ ಗೋಪಾಲ್, ಡಾ.ಹೆಚ್.ರಮೇಶ, ವಲಯ ಅರಣ್ಯಾಧಿಕಾರಿಗಳು, ಆನೆಶಿಬಿರದ ಸಿಬ್ಬಂದಿ ಸೇರಿದಂತೆ ಮುಂತಾದವರು ಹಾಜರಿದ್ದರು.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago