ಮೈಸೂರು : ವಿಶ್ವ ಆನೆ ದಿನವೇ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಸಾಕಾನ ಶಿಬಿರದ ಕ್ರಾಲ್ ನಲ್ಲಿ ಪಳಗಿಸಲಾಗುತ್ತಿದ್ದ ಸುಮಾರು 50ವರ್ಷ ಪ್ರಾಯದ ಸುಬ್ರಮಣಿ ಎಂಬ ಗಂಡಾನೆ ಸಾವನ್ನಪ್ಪಿದೆ.
ಸುಬ್ರಮಣಿ ಎಂಬ ಗಂಡಾನೆಯನ್ನು ಕ್ರಾಲ್ನಲ್ಲಿ ಪಳಗಿಸಲಾಗುತ್ತಿದ್ದು, ಕಳೆದ ಜುಲೈ 20ರಂದು ಹೆಚ್ಚಿನ ತರಬೇತಿಗಾಗಿ ಕ್ರಾಲ್ ಹೊರಗಡೆ ತಂದು ತರಬೇತಿ ನೀಡಲಾಗುತ್ತಿತ್ತು. ಆದರೆ ಆ.11ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸುಸ್ತಾಗಿರುವಂತೆ ಆನೆ ಮಲಗಿಕೊಂಡಿದೆ. ಮಲಗಿದ್ದ ಆನೆಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿ ಮೇಲೇಳಿಸಲು ಪ್ರಯತ್ನಿಸಲಾಗಿದ್ದರೂ ಆನೆಯು ಮೇಲೇಳಲಿಲ್ಲ. ಬಳಿಕ ಕ್ರೇನ್ ಸಹಾಯದಿಂದ ಎದ್ದು ನಿಲ್ಲಿಸಲು ಪ್ರಯತ್ನಿಸಲಾಗಿದರೂ ಎದ್ದು ನಿಲ್ಲಲಾಗದ ಸುಬ್ರಮಣಿ ವಿಶ್ವ ಆನೆ ದಿನದಂದೆ ಮದ್ಯಾಹ್ನ 3.15 ರ ಸಮಯದಲ್ಲಿ ಮೃತಪಟ್ಟಿರುತ್ತದೆ.
ಸುಬ್ರಮಣಿ ಆನೆಯು ಬಹುಅಂಗಾಂಗಳ ವೈಫಲ್ಯದಿಂದ ಬಳಲಿ ಸಾವನ್ನಪ್ಪಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಕಳೇಬರವನ್ನು ಮಣ್ಣಿನಲ್ಲಿ ಹೂತು ಹಾಕಲಾಯಿತು.
ಸ್ಥಳದಲ್ಲಿ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್, ಪಶು ವೈದ್ಯರಾದ ಡಾ.ಚಿಟ್ಟಿಯಪ್ಪ, ಡಾ.ಮದನ್ ಗೋಪಾಲ್, ಡಾ.ಹೆಚ್.ರಮೇಶ, ವಲಯ ಅರಣ್ಯಾಧಿಕಾರಿಗಳು, ಆನೆಶಿಬಿರದ ಸಿಬ್ಬಂದಿ ಸೇರಿದಂತೆ ಮುಂತಾದವರು ಹಾಜರಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…