ಮೈಸೂರು

86 ಕೋಟಿ ವೆಚ್ಚದಲ್ಲಿ ಕಪಿಲ ನದಿಗೆ ತಡೆಗೋಡೆ : ಶಾಸಕ ದರ್ಶನ ದ್ರುವನಾರಾಯಣ್‌ ಮನವಿಗೆ ಸರ್ಕರದ ಭರವಸೆ

ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ.

ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ ಬಂದಾಗಲೆಲ್ಲ ತುಂಬಿ ಉಕ್ಕೇರುವ ಕಪಿಲೆಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರನ ಸನ್ನಿಧಿ ನಂಜನಗೂಡು ಪ್ರವಾಹಕ್ಕೆ ಸಿಲುಕಿ ಕಷ್ಟನಷ್ಠಗಳಿಗೆ ಸಿಲುಕುವದರಿಂದ ಆಗಬಹುದಾದ ದುಷ್ಪರಿಣಾಮಗಳನ್ನು ಸರ್ಕಾಕ್ಕೆ ವಿಧಾನ ಸಭೆಯಲ್ಲಿ ಸುದೀರ್ಘವಾಗಿ ವಿವರಿಸಿದ ಶಾಸಕ ದರ್ಶನ್ ದ್ರುವನಾರಾಯಣರಗೆ 86 ಕೋಟಿ ವೆಚ್ಚದಲ್ಲಿ ತಡೆಗೊಡೆ ನಿರ್ಮಿಸಲಾಗುವದು ಎಂಭ ಭರವಸೆ ನೀಡಲಾಗಿದೆ.

ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರ ಸನ್ನಿಧಿಯ ಧುಸ್ಥಿತಿಯನ್ನು ವಿಧಾನ ಸಭಾ ಅಧಿವೇಶನದಲ್ಲಿ ದರ್ಶನ ದ್ರುವನಾರಾಯಣ ನೀರಾವರಿ ಸಚಿವರ ಗಮನಕ್ಕೆ ತಂದು ಪರಿಹಾರಬೇಕು ಎಂದು ಕೇಳಿದಾಗ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಗೃಹ ಸಚಿವ ಪರಮೇಶ್ವರ ಉತ್ತರ ನೀಡಿದ್ದು ನಿಮ್ಮ ಅಹವಾಲನ್ನು ಪರಾಮರ್ಷಿಸಿದ ಸರ್ಕಾರ ಶ್ರೀಕಂಠೇಶ್ವರ ಸ್ನಾನಘಟ್ಟ ಸೇರಿದಂತೆ ಪರುಶುರಾಮ ದೇವಾಲಯದ ವರಿಗೆ ಕಪಿಲಾ ನದಿಗೆ 86 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಅಭಿವೃದ್ದಿ ಕಾಮಗಾರಿ ಕೈಗೊಂಡು ಪ್ರವಾಹದ ಹಾವಳಿಯನ್ನು ಸಾಕಷ್ಟು ಕಡಿಮೆ ಮಾಡಲು ಯೋಜನೆ ಸಿಧ್ದಪಡಿಸಿದ್ದು ಶೀಘ್ರದಲ್ಲಿ ಅದನ್ನು ಕಾರ್ಯರೂಪಕ್ಕೆ ತರಲಾವುದು ಎಂದು ತಿಳಿಸಿದ್ದಾರೆ,

ಆಂದೋಲನ ಡೆಸ್ಕ್

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

4 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

4 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

5 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

5 hours ago