ಮೈಸೂರು

ಹುಣಸೂರಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು: ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದಾರೆ.

ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಶಾಸಕರು, ವಿವಿಧ ಇಲಾಖೆಗಳ ಮುಖೇನ ತಾಲೂಕಿಗೆ 311.67 ಕೋಟಿ ರೂ. ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇದಲ್ಲದೇ ತಾಲ್ಲೂಕಿನ ಹಲವು ಕೆರೆಗಳಿಗೆ ನೀರು ತುಂಬಿಸುವ ಸಲುವಾಗಿ 38 ಕೋಟಿ ರೂ.ಗಳ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಶೀಘ್ರದಲ್ಲೇ ಮಂಜೂರಾತಿ ದೊರೆಯಲಿದೆ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಮಾಹಿತಿ ನೀಡಿದರು.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗಾಗಿ 40 ಕೋಟಿ ರೂ ನೀರಾವರಿ ಯೋಜನೆಗಳ ಅಭಿವೃದ್ಧಿಗಾಗಿ 146 ಕೋಟಿ ರೂ, ಸಣ್ಣ ನೀರಾವರಿ ಇಲಾಖೆಗೆ 13.85 ಕೋಟಿ ರೂ, ಅಲ್ಪಸಂಖ್ಯಾತರ ಕಾಲೋನಿಗಳಿಗೆ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 3 ಕೋಟಿ ರೂ., ಐಟಿಡಿಪಿ ಇಲಾಖೆಗೆ 4.80 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆಗೆ 23.20 ಕೋಟಿ ರೂ., ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ 10 ಕೋಟಿ ರೂ., ಸೆಸ್ಕ್‌ನ ವಿವಿಧ ವಿದ್ಯುತ್‌ ವಿತರಣಾ ಕೇಂದ್ರಗಳ ನಿರ್ಮಾಣಕ್ಕೆ 57.32 ಕೋಟಿ ರೂ., ಹಿಂದುಳಿದ ವರ್ಗಗಳ ಇಲಾಖೆಯ ಅರಸುಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ 2 ಕೋಟಿ ರೂ, ಹುಣಸೂರು ಸಾರ್ವಜನಿಕರ ಅಸ್ಪತ್ರೆಗೆ ಮುಂದುವರೆದ ಕಾಮಗಾರಿಗೆ 9.50 ಕೋಟಿ ರೂ.ಗಳನ್ನು ನೀಡಲಾಗಿದೆ. ಇದರ ಜೊತೆಗೆ ಬಸ್‌ ನಿಲ್ದಾಣಗಳು, ದೇವಾಲಯಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಮತ್ತು ಸಮುದಾಯ ಭವನಗಳಿಗಾಗಿ 2 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

3 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago