ಮೈಸೂರು

ದಸರಾ ದೀಪಾಲಂಕಾರದ ಅಂದ ಹೆಚ್ಚಿಸಿ: ಸೆಸ್ಕ್ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ

– ವಿದ್ಯುತ್‌ ಗುತ್ತಿಗೆದಾರರೊಂದಿಗೆ ಪೂರ್ವಭಾವಿ ಸಭೆ
– 21 ದಿನಗಳ ದಿಪಾಲಂಕಾರ ಕುರಿತಂತೆ ಸಮಾಲೋಚನೆ

ಮೈಸೂರು: ನಾಡಹಬ್ಬ ದಸರಾ ನಮ್ಮ ಹಬ್ಬ, ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ದಸರಾ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ (ಸೆಸ್ಕ್)ದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ತಿಳಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. “ಈ ಬಾರಿ ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರ 21 ದಿನಗಳಿರುತ್ತವೆ. ಹೀಗಾಗಿ ಹೆಚ್ಚು ಮುತುವರ್ಜಿಯಿಂದ ಇದನ್ನು ನಿರ್ವಹಿಸಬೇಕಿದೆ”, ಎಂದರು.

“ದಸರಾ ಆಚರಣೆ ಮತ್ತು ದೀಪಾಲಂಕಾರ ನಮ್ಮ ಬದ್ಧತೆ ಎಂಬ ಮನಸ್ಥಿತಿಯೊಂದಿಗೆ ಎಲ್ಲರೂ ಒಂದಾಗಿ ಆಚರಣೆ ಮಾಡಬೇಕಿದೆ. ಹೀಗಾಗಿ ಇದೇ ಮನಸ್ಥಿತಿಯೊಂದಿಗೆ ದಸರಾ ವಿದ್ಯುತ್‌ ದೀಪಾಲಂಕಾರ ಮಾಡುವ ಮೂಲಕ ಅದರ ಅಂದ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ, ಎಲ್ಲರೂ ಒಂದಾಗಿ ದಸರಾ ಆಚರಿಸೋಣ. ಗುತ್ತಿಗೆದಾರರ ಯಾವುದೇ ಸಮಸ್ಯೆಗಳಿದ್ದರೂ ಎಲ್ಲವನ್ನೂ ಬಗೆಹರಿಸುವುದಾಗಿ”, ಭರವಸೆ ನೀಡಿದರು.

“ಈ ಬಾರಿಯ ದಸರಾ ಮಹೋತ್ಸವದಲ್ಲಿ 21 ದಿನಗಳವರೆಗೂ ವಿದ್ಯುತ್‌ ದೀಪಾಲಂಕಾರ ಇರಬೇಕೆಂದು ಈಗಾಗಲೇ ಮುಖ್ಯಮಂತ್ರಿಗಳು ಉನ್ನತ ಮಟ್ಟದ ಸಭೆಯಲ್ಲಿ ತಿಳಿಸಿದ್ದಾರೆ. ಹೀಗಾಗಿ ಆರಂಭದಿಂದ ಕೊನೆವರೆಗೂ ದೀಪಾಲಂಕಾರದ ಅಂದ ಉಳಿಯುವಂತೆ ನೋಡಿಕೊಳ್ಳಬೇಕಿದೆ. ಅಲ್ಲದೇ, ಬಹುತೇಕರು ದಸರಾ ಜಂಬೂಸವಾರಿ ಮೆರವಣಿಗೆ ಮುಗಿದ ನಂತರದಲ್ಲಿ ದೀಪಾಲಂಕಾರ ವೀಕ್ಷಣೆಗಾಗಿ ಬರುತ್ತಾರೆ. ಹೀಗಾಗಿ ಕಡೆಯ 8-10 ದಿನಗಳು ದೀಪಾಲಂಕಾರ ನಿರ್ವಹಣೆ ಮಾಡುವುದು ಸವಾಲಾಗಲಿದೆ”, ಎಂದರು.

ಸೆಸ್ಕ್‌ ತಾಂತ್ರಿಕ ನಿರ್ದೇಶಕರಾದ ಮುನಿಗೋಪಾಲ್‌ ರಾಜು ಅವರು ಮಾತನಾಡಿ, “ಕಳೆದ ನಾಲ್ಕೈದು ವರ್ಷಗಳಲ್ಲಿ ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಾಗಿದೆ. ಆದ್ದರಿಂದ ಈ ಬಾರಿ ದೀಪಾಲಂಕಾರಕ್ಕೆ ವಿಶೇಷ ಮೆರಗು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆದಿದ್ದು, ನಿರೀಕ್ಷೆ ಸಹ ಹೆಚ್ಚಿದೆ. ದೀಪಾಲಂಕಾರದಲ್ಲಿ ಹೊಸತನದ ಜತೆಗೆ ಗುಣಮಟ್ಟ, ಸುರಕ್ಷತೆಗೂ ಆದ್ಯತೆ ನೀಡಬೇಕಿದೆ. ಆದ್ದರಿಂದ ಗುಣಮಟ್ಟದ ದೀಪಗಳನ್ನು ಬಳಸುವ ಹಾಗೂ ಉತ್ತಮ ಕೆಲಸ ಮಾಡುವ ಅಗತ್ಯವಿದೆ. 21 ದಿನಗಳವರೆಗೂ ದೀಪಾಲಂಕಾರದ ಸರಿಯಾದ ನಿರ್ವಹಣೆ ನಿರ್ವಹಣೆ ಮಾಡಬೇಕಿದ್ದು, ದಸರಾ ಆರಂಭದ 3-4 ದಿನಗಳ ಮೊದಲೇ ಪರಿಪೂರ್ಣವಾದ ಲೈಟಿಂಗ್‌ ಮಾಡಿ, ಟ್ರಯಲ್‌ ನೀಡಬೇಕಿದೆ”, ಎಂದು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಮಾತನಾಡಿದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ತಮ್ಮ ಕೆಲವೊಂದು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚೆ ನಡೆಸಿ ಈ ಬಾರಿ ಸಮಸ್ಯೆ ಆಗದಂತೆ ಕ್ರಮವಹಿಸಬೇಕೆಂದು ಕೋರಿದರು.

ಸಭೆಯಲ್ಲಿ ವಿದ್ಯುತ್‌ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್‌.ರಮೇಶ್‌, ಸೆಸ್ಕ್‌ ಅಧೀಕ್ಷಕ ಇಂಜಿನಿಯರ್‌ ಸುನೀಲ್‌ ಕುಮಾರ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇದ್ದರು.

ಕೋಟ್‌
ದಸರಾ ದೀಪಾಲಂಕಾರ ವಿಜೃಂಭಣೆಯಿಂದ ಆಗಲು ಗುತ್ತಿಗೆದಾರರ ಪಾತ್ರ ಮುಖ್ಯವಾಗಿದೆ. ಈ ಬಾರಿ ವಿಭಿನ್ನ ರೀತಿಯಲ್ಲಿ ದೀಪಾಲಂಕಾರ ಮಾಡಲು ಚಿಂತನೆ ನಡೆದಿದೆ. 21 ದಿನಗಳವರೆಗೂ ದೀಪಾಲಂಕಾರ ಉಳಿಯುವಂತೆ ಮಾಡುವ ಜತೆಗೆ ಗುಣಮಟ್ಟ ಮತ್ತು ಸುರಕ್ಷತೆಗೂ ಆದ್ಯತೆ ನೀಡಬೇಕಿದೆ.
– ಜಿ. ಶೀಲಾ, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago