ಮೈಸೂರು

ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಿ: ಗುರುಸ್ವಾಮಿ

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜ‌ನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾ‌ನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಸಮಿತಿಯು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಿದೆ ಎಂದು ನುಡಿದರು.

ಅನ್ನಭಾಗ್ಯ ಯೋಜನೆಯಡಿ ತಾಲ್ಲೂಕಿನಲ್ಲಿ ಒಟ್ಟು 98,873 ಪಡಿತರ ಚೀಟಿಗಳ ಕುಟುಂಬದ ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನ್ವಯ ಆಹಾರ ಧಾನ್ಯಗಳನ್ನು ನಿಗದಿತ ಸಮಯಕ್ಕೆ ವಿತರಿಸಬೇಕು. ವಿಳಂಬ ಧೋರಣೆ ಅನುಸರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮೀ ಸೌಲಭ್ಯ ಪಡೆಯಲು ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸ್ಪಂದಿಸಬೇಕು. ಯುವ ನಿಧಿ ಯೋಜನೆಯಲ್ಲಿ 4,297 ಫಲಾನುಭವಿಗಳಿದ್ದು, ಇನ್ನೂ ಹೆಚ್ಚಿನ ಅಭ್ಯರ್ಥಿಗಳನ್ನು ನೋಂದಣಿ ಮಾಡಿಸಬೇಕು. ಗೃಹಜ್ಯೋತಿಯಲ್ಲಿ ಸೌಲಭ್ಯ ಒದಗಿಸುವಲ್ಲಿ ಯಾವುದೇ ದೂರುಗಳ ಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಶಕ್ತಿ ಯೋಜನೆಯು ಮಹಿಳೆಯರ ಸ್ವಾವಲಂಭಿ ಬದುಕಿಗೆ ನೆರವಾಗಿದೆ ಎಂದರು. ಈ ನಡುವೆ ಬಸ್‌ಗಳನ್ನು ಬೇಜವಾಜ್ದಾರಿಯಿಂದ ಚಾಲನೆ ಮಾಡುವ ಬಗ್ಗೆ ದೂರುಗಳು ಬರುತ್ತಿವೆ ಎಂದು ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿ, ಅಂತಹ ಚಾಲಕರಿಗೆ ಮನವರಿಕೆ ಮಾಡಿ. ಮುಂದುವರೆಸಿದರೆ ಕ್ರಮ ತೆಗುದಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗೆ ಹೇಳಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ.ಕೃಷ್ಣ ಅವರು ಮಾತನಾಡಿ, ನಾವೆಲ್ಲರೂ ಸರ್ಕಾರದ ಸೂಚನೆಯಂತೆ ಕರ್ತವ್ಯ ನಿರ್ವಹಿಸಬೇಕು. ಕಟ್ಟಕಡೆಯ ಅರ್ಹ ಫಲಾನುಭವಿಗಳಿಗೂ ಈ ಐದು ಗ್ಯಾರಂಟಿ ಯೋಜನೆಯನ್ನು ತಲುಪಿಸಲು ಶ್ರಮವಹಿಸಬೇಕು‌. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಎದುರಾದರೆ ಕೂಡಲೇ ಪರಿಹರಿಸುವ ಕೆಲಸವನ್ನು ಅಧಿಕಾರಿ ಮಾಡಬೇಕು ಎಂದು ಸೂಚಿಸಿದರು.

ನೂತನ ಕಚೇರಿ ಉದ್ಘಾಟನೆ

ತಾಲ್ಲೂಕು ಆಡಳಿತ ಕಚೇರಿಯ ಎರಡನೇ ಮಹಡಿಯಲ್ಲಿ ನಿರ್ಮಿಸಿರುವ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾ‌ನ ಸಮಿತಿಯ ಜಿಲ್ಲಾಧ್ಯಕ್ಷರಾದ ಅರುಣ್ ಕುಮಾರ್ ಅವರು, ಉಪಾಧ್ಯಕ್ಷರಾದ ಶಿವಕುಮಾರ್, ಲತಾ ರಾಜಶೇಖರ್ ಅವರು, ಮುಡಾ ಮಾಜಿ ಅಧ್ಯಕ್ಷರಾದ ಮರಿಗೌಡ ಅವರು, ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ಅವರು ಸೇರಿದಂತೆ ಸದಸ್ಯರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯುವನಿಧಿ ನೋಂದಣಿ ಅಭಿಯಾನದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಸದಸ್ಯರುಗಳಾದ ಬಿ.ರವಿ, ರಾಣಿ ಶಿವಣ್ಣ, ಮಾವಿನಹಳ್ಳಿ ನಾಗೇಶ್, ಮೊಹಮ್ಮದ್ ಆಲಿ ಬಾಬು, ಎಂ.ಸೋಮಣ್ಣ, ಕರೀಗೌಡ, ಹೆಚ್.ಡಿ.ಚನ್ನಯ್ಯ, ಮೂಡಪ್ಪ, ವಿ.ಸಿ.ಬಸವರಾಜು, ಶಂಕರ, ನಾಗರಾಜಮೂರ್ತಿ, ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

14 mins ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

16 mins ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

29 mins ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

36 mins ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

2 hours ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

2 hours ago