ಮೈಸೂರು: ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪೀಪಲ್ಸ್ ಪಾರ್ಕ್ ಭೇಟಿ ನೀಡಿ ಪರೀಕ್ಷೆ ಸುಲಲಿತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಮೈಸೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಎಂಬಿಎ ಹಾಗೂ ಎಂಸಿಎ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಮೈಸೂರು ನಗರದಲ್ಲಿ ಎಂಸಿಎ ಪರೀಕ್ಷೆಗೆ– 3004 ವಿದ್ಯಾರ್ಥಿಗಳು ಹಾಗೂ ಎಂಬಿಎ ಪರೀಕ್ಷೆಗೆ- 4856 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೋಂದಣಿ ಮಾಡಿಕೊಂಡಿದ್ದು MCA ಪರೀಕ್ಷೆಯು ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಮತ್ತು MBA ಪರೀಕ್ಷೆಯು ಮಧ್ಯಾಹ್ನ 02.30 ರಿಂದ 04.30 ಗಂಟೆಯವರೆಗೆ ನಡೆಯುತ್ತಿದೆ.
ಇದನ್ನೂ ಓದಿ: ಯುಜಿಸಿ ನೆಟ್-ಕೆಸೆಟ್ ಪರೀಕ್ಷೆಗೆ ತರಬೇತಿ
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ, ಮೈಸೂರು ನಗರದಲ್ಲಿ PG CET ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ವೀಕ್ಷಕರು ಹಾಜರಿದ್ದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…