ಮೈಸೂರು

ಪ್ರವೇಶ ಪರೀಕ್ಷೆ : ಅಪರ ಜಿಲ್ಲಾಧಿಕಾರಿಗಳಿಂದ ಪರೀಕ್ಷೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ

ಮೈಸೂರು: ‌ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪೀಪಲ್ಸ್‌ ಪಾರ್ಕ್‌ ಭೇಟಿ ನೀಡಿ ಪರೀಕ್ಷೆ ಸುಲಲಿತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಮೈಸೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಎಂಬಿಎ ಹಾಗೂ ಎಂಸಿಎ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಮೈಸೂರು ನಗರದಲ್ಲಿ ಎಂಸಿಎ ಪರೀಕ್ಷೆಗೆ– 3004 ವಿದ್ಯಾರ್ಥಿಗಳು ಹಾಗೂ ಎಂಬಿಎ ಪರೀಕ್ಷೆಗೆ- 4856 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೋಂದಣಿ ಮಾಡಿಕೊಂಡಿದ್ದು MCA ಪರೀಕ್ಷೆಯು ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಮತ್ತು MBA ಪರೀಕ್ಷೆಯು ಮಧ್ಯಾಹ್ನ 02.30 ರಿಂದ 04.30 ಗಂಟೆಯವರೆಗೆ ನಡೆಯುತ್ತಿದೆ.

ಇದನ್ನೂ ಓದಿ: ಯುಜಿಸಿ ನೆಟ್-ಕೆಸೆಟ್‌ ಪರೀಕ್ಷೆಗೆ ತರಬೇತಿ

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ, ಮೈಸೂರು ನಗರದಲ್ಲಿ PG CET ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ವೀಕ್ಷಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago