ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರ (ಜೂನ್.15) ಭೇಟಿ ನೀಡಿದ ಅರಣ್ಯ ಸಚಿವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು.
ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮರಣ ಹೊಂದಿದ ವಿಚಾರವಾಗಿ ವಿದ್ಯುತ್ನಿಂದ ಆನೆಗಳು ಸಾಯುತ್ತಿರುವುದು ವಿಷಾಧನೀಯ. ಈವರೆಗೆ ಇದರಿಂದ ಮಡಿದ ಆನೆಗಳ ವರದಿ ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗವುದು ಎಂದು ವಿಷಾದ ವ್ಯಕ್ತಪಡಿಸಿದರು.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸಂಬಂಧಸಿದಂತೆ ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಮಾಡಲಾಗುವುದು ಎಂದರು.
ಇನ್ನು ದರ್ಶನ್ ರಾಯಭಾರಿಯಾಗಿದ್ದ ವಿಚಾರಕ್ಕೆ, ನಮ್ಮ ಇಲಾಖೆಗೆ ಯಾರೂ ರಾಯಭಾರಿಗಳಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…