ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರ (ಜೂನ್.15) ಭೇಟಿ ನೀಡಿದ ಅರಣ್ಯ ಸಚಿವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು.
ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮರಣ ಹೊಂದಿದ ವಿಚಾರವಾಗಿ ವಿದ್ಯುತ್ನಿಂದ ಆನೆಗಳು ಸಾಯುತ್ತಿರುವುದು ವಿಷಾಧನೀಯ. ಈವರೆಗೆ ಇದರಿಂದ ಮಡಿದ ಆನೆಗಳ ವರದಿ ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗವುದು ಎಂದು ವಿಷಾದ ವ್ಯಕ್ತಪಡಿಸಿದರು.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸಂಬಂಧಸಿದಂತೆ ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಮಾಡಲಾಗುವುದು ಎಂದರು.
ಇನ್ನು ದರ್ಶನ್ ರಾಯಭಾರಿಯಾಗಿದ್ದ ವಿಚಾರಕ್ಕೆ, ನಮ್ಮ ಇಲಾಖೆಗೆ ಯಾರೂ ರಾಯಭಾರಿಗಳಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…