ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರ (ಜೂನ್.15) ಭೇಟಿ ನೀಡಿದ ಅರಣ್ಯ ಸಚಿವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು.
ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮರಣ ಹೊಂದಿದ ವಿಚಾರವಾಗಿ ವಿದ್ಯುತ್ನಿಂದ ಆನೆಗಳು ಸಾಯುತ್ತಿರುವುದು ವಿಷಾಧನೀಯ. ಈವರೆಗೆ ಇದರಿಂದ ಮಡಿದ ಆನೆಗಳ ವರದಿ ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗವುದು ಎಂದು ವಿಷಾದ ವ್ಯಕ್ತಪಡಿಸಿದರು.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸಂಬಂಧಸಿದಂತೆ ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಮಾಡಲಾಗುವುದು ಎಂದರು.
ಇನ್ನು ದರ್ಶನ್ ರಾಯಭಾರಿಯಾಗಿದ್ದ ವಿಚಾರಕ್ಕೆ, ನಮ್ಮ ಇಲಾಖೆಗೆ ಯಾರೂ ರಾಯಭಾರಿಗಳಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…