ಮೈಸೂರು

ದಸರಾ ಆನೆಗಳು ನಮ್ಮ ಅಸ್ಮಿತೆ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವ ಪ್ರಸ್ತಾಪವಿಲ್ಲ: ಈಶ್ವರ್‌ ಖಂಡ್ರೆ

ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರ (ಜೂನ್.15) ಭೇಟಿ ನೀಡಿದ ಅರಣ್ಯ ಸಚಿವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು.

ವಿದ್ಯುತ್‌ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮರಣ ಹೊಂದಿದ ವಿಚಾರವಾಗಿ ವಿದ್ಯುತ್‌ನಿಂದ ಆನೆಗಳು ಸಾಯುತ್ತಿರುವುದು ವಿಷಾಧನೀಯ. ಈವರೆಗೆ ಇದರಿಂದ ಮಡಿದ ಆನೆಗಳ ವರದಿ ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗವುದು ಎಂದು ವಿಷಾದ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣಕ್ಕೆ ಸಂಬಂಧಸಿದಂತೆ ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಇನ್ನು ದರ್ಶನ್‌ ರಾಯಭಾರಿಯಾಗಿದ್ದ ವಿಚಾರಕ್ಕೆ, ನಮ್ಮ ಇಲಾಖೆಗೆ ಯಾರೂ ರಾಯಭಾರಿಗಳಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

7 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

8 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago