ಮೈಸೂರು

ದಸರಾ ಆನೆಗಳು ನಮ್ಮ ಅಸ್ಮಿತೆ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವ ಪ್ರಸ್ತಾಪವಿಲ್ಲ: ಈಶ್ವರ್‌ ಖಂಡ್ರೆ

ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರ (ಜೂನ್.15) ಭೇಟಿ ನೀಡಿದ ಅರಣ್ಯ ಸಚಿವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು.

ವಿದ್ಯುತ್‌ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮರಣ ಹೊಂದಿದ ವಿಚಾರವಾಗಿ ವಿದ್ಯುತ್‌ನಿಂದ ಆನೆಗಳು ಸಾಯುತ್ತಿರುವುದು ವಿಷಾಧನೀಯ. ಈವರೆಗೆ ಇದರಿಂದ ಮಡಿದ ಆನೆಗಳ ವರದಿ ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸಲಾಗವುದು ಎಂದು ವಿಷಾದ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣಕ್ಕೆ ಸಂಬಂಧಸಿದಂತೆ ಈ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ. ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಇನ್ನು ದರ್ಶನ್‌ ರಾಯಭಾರಿಯಾಗಿದ್ದ ವಿಚಾರಕ್ಕೆ, ನಮ್ಮ ಇಲಾಖೆಗೆ ಯಾರೂ ರಾಯಭಾರಿಗಳಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

3 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

4 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

12 hours ago