ಮೈಸೂರು

ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಯಿಂದ ರಾಮರಾಜ್ಯ ಸ್ಥಾಪನೆ: ಶಾಸಕ ಜಿಟಿಡಿ

ಮೈಸೂರು: ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು .ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಮಾಜಿ ಸಚಿವರೂ ಆದಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಾರ್ಮಿಕರ ಅತಿ ಹೆಚ್ಚು ಅಂಕಗಳನ್ನು ಗಳಿಸಿದ 39 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು.

ದುಡಿಯುವ ವರ್ಗಗಳಲ್ಲಿ ಶೇ.೫೦ ರಷ್ಟು ಮಹಿಳೆಯರು ಇದ್ದಾರೆ. ಜಮೀನು, ಹೈನುಗಾರಿಕೆ,ಗುಡಿ ಕೈಗಾರಿಕೆ,ಜವಳಿ, ಮನೆಯಲ್ಲಿ ಕೆಲಸ ಮಾಡುತ್ತಾರೆ.

ಜಮೀನಿನಲ್ಲಿ ಪುರುಷರಷ್ಠೇ ಕಳೆ ಕೀಳುತ್ತಾರೆ. ನಾಟಿ ಹಾಕುತ್ತಾರೆ. ಈಗ ಮಹಿಳೆಯರು ಆಧುನಿಕ ಕಾಲದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕಾಗಿದೆ ಎಂದು ಸಲಹೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಚಿವೆಯಾಗಿ 6 ಬಜೆಟ್‌ ಮಂಡಿಸಿ ದಾಖಲೆ ಬರೆದಿದ್ದಾರೆ. ಅವರು ಪಡೆದ ಶಿಕ್ಷಣ, ವಿದ್ವತ್‌ ದೇಶದ ಎಲ್ಲ ಹೆಣ್ಣು ಮಕ್ಕಳಿಗೆ ಮಾದರಿಯಾಗಬೇಕು ಎಂದರು. 

ಹಿಂದಿನ ಅವಧಿಯಲ್ಲಿ 1 ಲಕ್ಷದ 9 ಸಾವಿರ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿತ್ತು. ಕೊರೊನಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭಾರೀ ಅನುಕೂಲವಾಯಿತು. ಈಗ ಲ್ಯಾಪ್‌ಟಾಪ್‌ ಪಡೆದ ವಿದ್ಯಾರ್ಥಿನಿಯರು ತಮ ಸಶಕ್ತವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜತೆಯಲ್ಲಿ ಬದುಕು ಕಟ್ಟಿಕೊಳ್ಳಲು ಚಿಂತನೆ ನಡೆಸಬೇಕು. ಜತೆಗೆ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಗೊಂದಲವಿಲ್ಲದೇ ಆಯ್ಕೆ ಮಾಡಿದ ವಿಷಯದ ಮೇಲೆ ನಿರಂತರ ಅಧ್ಯಯನ ನಡೆಸಿದರೆ ತಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳೆಯರು ಸರ್ಕಾರದ ಸವಲತ್ತುಗಳನ್ನು ಪಡೆಯಬೇಕು. ಸ್ವಯಂ ಉದ್ಯೋಗ ಸ್ಥಾಪಿಸಿ ಬೇರೆಯವರಿಗೆ ನೆರವಾಗುವ ರೀತಿಯಲ್ಲಿ ಅಭಿವೃದ್ಧಿ ಹೊರಬೇಕೆಂದು ನುಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜೇಶ್‌ ಜಾಧವ್‌, ಮುಖಂಡರಾದ ಚನ್ನೇಗೌಡ, ಸತೀಶ್‌, ರಾಜು, ಕುಮಾರಸ್ವಾಮಿ, ಮಹದೇವು, ಶಿವಲಿಂಗ ಮುಂತಾದವರು ಇದ್ದರು

andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

5 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

6 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago