ಮೈಸೂರು

ಆದರ್ಶ ವ್ಯಕ್ತಿಗಳ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು – ಸಿ. ಎನ್ ಮಂಜೇಗೌಡ

ಮೈಸೂರು :  ವೇಮನ ಹಾಗೂ ಅಂಬಿಗರ ಚೌಡಯ್ಯನವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನ ಪಾಲಿಸಬೇಕು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಹೇಳಿದರು.

ಇಂದು ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಮಹಾಯೋಗಿ ಶ್ರೀ ವೇಮನ ಜಯಂತಿ ಮತ್ತು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆಗಳು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದು ಜನರು ಭಾಗವಹಿಸಿ ಇದರಿಂದ ಸಿಗುವ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ವ್ಯಕಿಗಳಾಗಲಿ ಎಂದು. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ವಿಚಾರ ಹಾಗೂ ತಿಳುವಳಿಕೆಗಳು ಹೆಚ್ಚಾಗುತ್ತವೆ.

ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ದಿಯಾಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು.

ಕೆಟ್ಟ ವಿಚಾರಗಳು ಮನಸ್ಸಿನಲ್ಲಿ ಬಂದಾಗ ಅವುಗಳನ್ನು ತೊರೆದು ಒಳ್ಳೆಯ ವಿಚಾರದತ್ತ ಗಮನ ಕೊಡಬೇಕು. ಕ್ರೋದ, ಮದ -ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್, ಕನ್ನಡಪರ ಹೋರಾಟಗಾರರಾದ ವಿಠಲ್ ಮೂರ್ತಿ, ಪ್ರೊ. ಜ್ಯೋತಿ ಶಂಕರ್, ನಿವೃತ್ತ ಪ್ರಧ್ಯಾಪಕರಾದ ಪ್ರೊ. ಎಚ್. ಎಂ. ವಸಂತಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

9 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago