ಮೈಸೂರು

ಆದರ್ಶ ವ್ಯಕ್ತಿಗಳ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು – ಸಿ. ಎನ್ ಮಂಜೇಗೌಡ

ಮೈಸೂರು :  ವೇಮನ ಹಾಗೂ ಅಂಬಿಗರ ಚೌಡಯ್ಯನವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನ ಪಾಲಿಸಬೇಕು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಹೇಳಿದರು.

ಇಂದು ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಮಹಾಯೋಗಿ ಶ್ರೀ ವೇಮನ ಜಯಂತಿ ಮತ್ತು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆಗಳು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದು ಜನರು ಭಾಗವಹಿಸಿ ಇದರಿಂದ ಸಿಗುವ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ವ್ಯಕಿಗಳಾಗಲಿ ಎಂದು. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ವಿಚಾರ ಹಾಗೂ ತಿಳುವಳಿಕೆಗಳು ಹೆಚ್ಚಾಗುತ್ತವೆ.

ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ದಿಯಾಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು.

ಕೆಟ್ಟ ವಿಚಾರಗಳು ಮನಸ್ಸಿನಲ್ಲಿ ಬಂದಾಗ ಅವುಗಳನ್ನು ತೊರೆದು ಒಳ್ಳೆಯ ವಿಚಾರದತ್ತ ಗಮನ ಕೊಡಬೇಕು. ಕ್ರೋದ, ಮದ -ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್, ಕನ್ನಡಪರ ಹೋರಾಟಗಾರರಾದ ವಿಠಲ್ ಮೂರ್ತಿ, ಪ್ರೊ. ಜ್ಯೋತಿ ಶಂಕರ್, ನಿವೃತ್ತ ಪ್ರಧ್ಯಾಪಕರಾದ ಪ್ರೊ. ಎಚ್. ಎಂ. ವಸಂತಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

3 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

4 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

4 hours ago