ಮೈಸೂರು : ವೇಮನ ಹಾಗೂ ಅಂಬಿಗರ ಚೌಡಯ್ಯನವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನ ಪಾಲಿಸಬೇಕು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಹೇಳಿದರು.
ಇಂದು ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಮಹಾಯೋಗಿ ಶ್ರೀ ವೇಮನ ಜಯಂತಿ ಮತ್ತು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆಗಳು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದು ಜನರು ಭಾಗವಹಿಸಿ ಇದರಿಂದ ಸಿಗುವ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ವ್ಯಕಿಗಳಾಗಲಿ ಎಂದು. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ವಿಚಾರ ಹಾಗೂ ತಿಳುವಳಿಕೆಗಳು ಹೆಚ್ಚಾಗುತ್ತವೆ.
ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ದಿಯಾಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು.
ಕೆಟ್ಟ ವಿಚಾರಗಳು ಮನಸ್ಸಿನಲ್ಲಿ ಬಂದಾಗ ಅವುಗಳನ್ನು ತೊರೆದು ಒಳ್ಳೆಯ ವಿಚಾರದತ್ತ ಗಮನ ಕೊಡಬೇಕು. ಕ್ರೋದ, ಮದ -ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್, ಕನ್ನಡಪರ ಹೋರಾಟಗಾರರಾದ ವಿಠಲ್ ಮೂರ್ತಿ, ಪ್ರೊ. ಜ್ಯೋತಿ ಶಂಕರ್, ನಿವೃತ್ತ ಪ್ರಧ್ಯಾಪಕರಾದ ಪ್ರೊ. ಎಚ್. ಎಂ. ವಸಂತಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…