ಮೈಸೂರು : ಪ್ರಪಂಚದಲ್ಲಿ ಅತ್ಯಂತ ದೊಡ್ಡ ಸಾರ್ವತ್ರಿಕ ಚುನಾವಣೆಯದಂತಹ ಭಾರತದ ಲೋಕಸಭಾ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರು ಗರ್ವದಿಂದ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಸದೃಢ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಕರೆ ನೀಡಿದರು.
ಇಂದು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಕುವೆಂಪುನಗರದ ಜ್ಞಾನಗಂಗ ಶಾಲೆಯಲ್ಲಿ ಆಯೋಜಿಸಲಾಗಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮತ ನೀಡುವುದು ಪ್ರತಿಯೊಬ್ಬ ಮತದಾರನ ಹಕ್ಕು. ಹಾಗಾಗಿ ಪ್ರತಿಯೊಬ್ಬ ಮತದಾರನು ಕಡ್ಡಾಯವಾಗಿ ಮತ ಹಾಕುವ ಮೂಲಕ ಚುನಾವಣೆಯ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದರು.
ಇಂದಿನಿಂದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 2925 ಮತಗಟ್ಟೆಗಳಲ್ಲಿ ಮತದಾರರಿಗೆ ಮತಗಟ್ಟೆಗಳಲ್ಲಿ ಸಿಗುವ ಸೌಲಭ್ಯಗಳು ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ನಡೆ ಮತಗಟ್ಟೆಗಳ ಕಡೆ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ.
ಆ ಹಿನ್ನೆಲೆ ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ ಧ್ವಜಾರೋಹಣ ಮಾಡಿ ಮತಗಟ್ಟೆಗಳ ಬಗ್ಗೆ ಜನರಲ್ಲಿ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ ಎಂದರು.
ಮತದಾರರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಮತದಾನದ ದಿನ ಬೇಕಾಗುವಂತಹ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಹಿರಿಯರು ಮತ್ತು ವಿಶೇಷ ಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿರುತ್ತದೆ.
ಅದಲ್ಲದೆ ಬಿಸಿಲು ಹೆಚ್ಚಾದಂತೆಲ್ಲಾ ಮತದಾರರ ಹಿತ ದೃಷ್ಟಿಯಿಂದ ಆಸನದ ವ್ಯವಸ್ಥೆ ಇರುವ ವೈಟಿಂಗ್ ರೂಮ್ ನ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದನ್ನು ಪ್ರತಿಯೊಬ್ಬ ಮತದಾರರು ಉಪಯೋಗಿಸಿಕೊಂಡು ಮತದಾನ ಮಾಡಲು ಮುಂದೆ ಬರಬೇಕು ಎಂದು ತಿಳಿಸಿದರು.
ಕ್ಯೂ ಮ್ಯಾನೇಜ್ಮೆಂಟ್ ಆಪ್ ನ ಮೂಲಕ ಸರದಿ ಸಾಲುಗಳಿಂದ ಜನರಿಗೆ ಆಗುವ ಪ್ರತ್ಯೇಕ ಸಾಲುಗಳ ನಿರ್ಮಾಣ ಮಾಡಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಮೂರು ಬೂತ್ ಗಿಂತ ಹೆಚ್ಚಾಗಿರುವಲ್ಲಿ ವೋಟರ್ ಅಸಿಸ್ಟೆಂಟ್ ಬೂತ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು ಇದರಿಂದ ಮತದಾರರಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.
ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸುವುದು ಅಥವಾ ಅವರನ್ನು ಕಡ್ಡಾಯವಾಗಿ ಮತದಾನ ಅರಿವು ಮೂಡಿಸುವುದು ಕೇವಲ ಅಧಿಕಾರಿಗಳದ್ದಷ್ಟೇ ಕೆಲಸವಲ್ಲ. ಪ್ರತಿಯೊಬ್ಬ ಯುವಕರು ಚುನಾವಣೆಯ ಹಬ್ಬದಲ್ಲಿ ಇತರರಿಗೂ ಅದರ ಮಹತ್ವವನ್ನು ತಿಳಿಸಿ ಕಡ್ಡಾಯವಾಗಿ ತಮ್ಮ ಸುತ್ತಮುತ್ತಲಿನ ಜನರು ಮತದಾನ ಮಾಡುವಂತೆ ನೋಡಿಕೊಳ್ಳುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಐಕಾನ್ ಗಳಿಂದ ಮತದಾನ ಪ್ರಾತ್ಯಕ್ಷಿಕೆಯ ಮೂಲಕ ಪ್ರತಿ ಮತಗಟ್ಟೆಗಳಲ್ಲಿಯೂ ಮತದಾರರಲ್ಲಿ ಮತದಾನ ಮಾಡುವ ಕ್ರಮಗಳನ್ನು ತಿಳಿಸಲಾಗುವುದು ಎಂದರು.
ಏಪ್ರಿಲ್ 26ರಂದು ರಾಷ್ಟ್ರೀಯ ಹಬ್ಬವಾದ ಸಾರ್ವತ್ರಿಕ ಚುನಾವಣೆ ನಡೆಯುವುದರಿಂದ ಎಲ್ಲಾ ಕಚೇರಿಗಳಿಗೂ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿರುತ್ತದೆ.
ಹಾಗಾಗಿ ಪ್ರತಿಯೊಬ್ಬ ಕಾರ್ಮಿಕರು ಹಾಗೂ ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡುವ ವ್ಯಕ್ತಿಯು ಸಹ ಮತದಾನದಲ್ಲಿ ಪಾಲ್ಗೊಂಡು ಅಂದು ಮತದಾನವನ್ನು ತಮ್ಮ ಮೊದಲ ಆಯ್ಕೆಯನ್ನಾಗಿ ಮಾಡಿ, ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ.ಎಂ ಗಾಯತ್ರಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್.ಮಧು, ಚುನಾವಣಾ ರಾಯಭಾರಿ ತನಿಷ್ಕಾ ಮೂರ್ತಿ, ಪ್ಯಾರಾ ಅಥ್ಲೆಟಿಕ್ಸ್ ಆಟಗಾರ ಮಹೇಂದ್ರ ಎಂ.ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…