ಮೈಸೂರು

ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸ ಬೇಕು : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಾಗಿದೆ ಎಂದರು. ಡೆಂಗ್ಯು ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯೆ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು, ಮನೆಯ ಸುತ್ತಮುತ್ತ ನೀರು ನಿಲ್ಲದೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ.
ರಸ್ತೆ ಬದಿಯಲ್ಲಿ ಕಸ ಹಾಕದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು, ಕಸವನ್ನು ಪ್ರತಿ ಮನೆಗಳಿಂದ ಸಂಗ್ರಹಿಸುವ ಕೆಲಸವಾಗಬೇಕು ಎಂದರು. ಯಾವುದೇ ಜ್ವರ ಅಥವಾ ಡೆಂಗ್ಯೂ ಪಾಸಿಟಿವ್ ಕಂಡು ಬಂದರೆ ಸ್ವಯಂ ಪ್ರೇರಿತವಾಗಿ ಚಿಕಿತ್ಸೆಯನ್ನು ಪಡೆಯದೆ, ವೈದ್ಯರನ್ನು ಸಂಪರ್ಕಿಸುವಂತೆ ತಿಳಿಸಿದರು.

ಸಾರ್ವಜನಿಕರು ನೀರು ಶೇಖರಿಸುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್, ಬಕೆಟ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಢಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ, ಈ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳೀಯ ಆರೋಗ್ಯ ಇಲಾಖೆಯ ಅಧಿಕಾರಿಗಳೊಡನೆ ಸೇರಿ ಕ್ರಮ ಕೈಗೊಳ್ಳಬೇಕು. ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಢಿಸಬೇಕು ಎಂದು ತಿಳಿಸಿದರು.

ಜಲಜೀವನ ಮಿಷನ್ ಯೋಜನೆಯಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ದೊಡ್ಡಮಾರಗೌಡನಹಳ್ಳಿ, ಧನಗಳ್ಳಿ, ಇಲವಾಲ ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತ ಜೆ.ಜೆ.ಎಂ. ಅನುಷ್ಠಾನಗೊಂಡಿದ್ದು, ಪೂರ್ಣಪ್ರಮಾಣದಲ್ಲಿ ಕಾಮಗಾರಿಗಳು ಕೈಗೊಂಡಿಲ್ಲವೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಸಕರಿಗೆ ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಗ್ರಾಮೀಣ ನೈರ್ಮಲ್ಯ ಮತ್ತು ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಹಾಗೂ ಕ್ಷೇತ್ರದಲ್ಲಿ ಯಾವ ಯಾವ ಗ್ರಾಮದಲ್ಲಿ ಜೆ.ಜೆ.ಎಂ. ಕಾಮಗಾರಿಗಳು ಪೂರ್ಣಗೊಂಡಿಲ್ಲವೆಂಬ ವರದಿಯನ್ನು ನೀಡುವಂತೆ ಹಾಗೂ ಕ್ಷೇತ್ರದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿಯನ್ನು ವರದಿ ಮಾಡುವಂತೆ ಸೂಚಿಸಿದರು. ಹಾಗೂ ಉದ್ಬೂರು ಗ್ರಾಮದಲ್ಲಿ ಹೆಚ್ಚುವರಿಯಾಗಿ ೨ ಲಕ್ಷ ಲೀಟರ್ ಟ್ಯಾಂಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ್ ಯೋಜನೆಯಡಿ ಟ್ಯಾಂಕ್ ನಿರ್ಮಾಣ ಮಾಡಲು ಕಲ್ಯಾಣಿ ನಗರ, ಪುಟ್ಟೇಗೌಡ ಬಡಾವಣೆ, ರವಿಶಂಕರ್ ಬಡಾವಣೆಗಳಲ್ಲಿ ಸ್ಥಳ ನೀಡುವಂತೆ ಮೂಡಾ ಆಯುಕ್ತರಿಗೆ ದೂರವಾಣಿ ಮೂಲಕ ತಿಳಿಸಿದರು.

ಸಭೆಯಲ್ಲಿ ಹೂಟಗಳ್ಳಿ ನಗರಸಭೆ ಪೌರಾಯುಕ್ತ ಚಂದ್ರಶೇಖರ್, ಕಾರ್ಯನಿರ್ವಹಣಾಧಿಕಾರಿಗಳಾದ ಗಿರಿಧರ್, ತಾಲ್ಲೂಕು ಆರೋಗ್ಯಾಧಿಕಾರಿಯಾದ ಡಾ. ಪುಟ್ಟತಾಯಮ್ಮ, ಪ.ಪಂಚಾಯಿತಿ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎಇಇ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಭಾಗಹವಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

11 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

16 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

21 mins ago