ಮೈಸೂರು : ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು
ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.
ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತು ರಾಜ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಹಾಗೂ ಇತರೆ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…